ಬ್ರೇಕಿಂಗ್ ನ್ಯೂಸ್
01-12-23 10:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅದರಿಂದಲೇ ರಾಜ್ಯದಲ್ಲಿ ಬಾಂಬ್ ಬೆದರಿಕೆ ಹೆಚ್ಚುತ್ತಿವೆ ಎಂದು ಬಿಜೆಪಿ ಶಾಸಕ ಎನ್ ಮುನಿರತ್ನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ. ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು.
ಸ್ಪೀಕರ್ ಕೂರುವ ಜಾಗದಲ್ಲಿ ಅಶೋಕ ಸ್ತಂಭ, ಸೂರ್ಯ, ಚಂದ್ರ ಇದೆ. ಕುರ್ಚಿಯಲ್ಲಿ ಕೂರುವ ವ್ಯಕ್ತಿಗೆ ಗೌರವ ಕೊಡ್ತೀವೋ ಇಲ್ಲವೋ ಗೊತ್ತಿಲ್ಲ. ಆ ಅಶೋಕ ಸ್ತಂಭ, ಸೂರ್ಯ, ಚಂದ್ರ ಇವುಗಳಿಗಂತೂ ಕೈ ಮುಗೀತೀವಿ. ಪೀಠಕ್ಕೆ ಇಂತಹ ಅಗೌರವ ತೋರುವ ವ್ಯಕ್ತಿಗಳಿಂದಲೇ ಬಾಂಬ್ ಬೆದರಿಕೆ ಬರ್ತಿದೆ ಎಂದು ಮುನಿರತ್ನ ಹೇಳಿದರು.
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಬೆದರಿಕೆ ;
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಶುಕ್ರವಾರ ಮುಂಜಾನೆ 6 ಗಂಟೆ ಮತ್ತು 9 ಗಂಟೆಯ ನಡುವೆ ಈ-ಮೇಲ್ಗಳು ಬಂದಿದ್ದು, ಅದರಲ್ಲಿ ಶಾಲೆಯ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಲಾಗಿತ್ತು. ಅಪ್ಪಟ ಉಗ್ರಗಾಮಿಗಳ ಭಾಷೆಯಲ್ಲಿರುವ ಈ ಪತ್ರದಲ್ಲಿ ಒಂದೋ ನೀವು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕು. ಇಲ್ಲವಾದರೆ ನಿಮ್ಮನ್ನು, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಆದರೆ, ಯಾವುದೇ ಶಾಲೆಗಳ ಆವರಣದಲ್ಲಿ ಇದುವರೆಗೆ ಬಾಂಬ್ ಪತ್ತೆಯಾಗಿಲ್ಲ.
BJP Mla Munirathna sparks controversy on Bomb Email to schools in Bangalore about Congress. Says Congress supports terror activities.
26-07-24 10:39 pm
HK News Desk
Greater Bengalore, DK Shivakumar: ರಾಮನಗರ ಇನ್ನ...
26-07-24 09:58 pm
MUDA Scam, Byrathi Suresh: ಕೇಂದ್ರ ಸಚಿವ ಕುಮಾರಸ...
26-07-24 09:27 pm
Shalini Rajneesh, Rajneesh Goyal: ಮುಖ್ಯ ಕಾರ್ಯ...
26-07-24 09:00 pm
Bangalore bike wheelie: ಬೆಂಗಳೂರಿನಲ್ಲಿ ಹೆಚ್ಚಾಯ...
26-07-24 08:50 pm
26-07-24 05:51 pm
HK News Desk
ಬಯಲು ಶೌಚಕ್ಕೆ ಹೋದವನ ಕತ್ತಿಗೆ ಸುತ್ತಿಕೊಂಡ 13 ಅಡಿ...
25-07-24 01:03 pm
ನೇಪಾಳ ; ಟೇಕಾಫ್ ವೇಳೆ ರನ್ ವೇನಲ್ಲೇ ಹೊತ್ತಿ ಉರಿದ...
24-07-24 01:48 pm
ಪ್ಯಾರಿಸ್ ಒಲಿಂಪಿಕ್ಸ್ ಗೆ ಭಯೋತ್ಪಾದಕ ದಾಳಿ ಬೆದರಿಕೆ...
24-07-24 12:25 pm
IAS Wife Suicide, Rowdy, Crime; ರೌಡಿ ಹಿಂದೆ ಓಡ...
23-07-24 08:45 pm
26-07-24 10:24 pm
Mangalore Correspondent
Mangalore rain, Uchila, Someshwara beach: ಸೋಮ...
26-07-24 09:06 pm
Mangalore Liquid Lounge News: ವಿದ್ಯಾರ್ಥಿಗಳೇ ಬ...
26-07-24 05:07 pm
Mangalore, Vinay Kulkarni, Koragajja: ತುಳುನಾಡ...
26-07-24 02:11 pm
Mangalore rain, Ullal house collapsed: ಉಳ್ಳಾಲ...
25-07-24 11:19 pm
26-07-24 03:42 pm
Bangalore Correspondent
Mangalore Jail Raid: ನಸುಕಿನಲ್ಲಿ ಮಂಗಳೂರು ಜೈಲಿಗ...
25-07-24 11:44 am
Shivamogga Murder News: ಪ್ರೀತಿಸಿದ ಯುವತಿಯನ್ನೇ...
24-07-24 06:45 pm
Bangalore PG Murder: ಬೆಂಗಳೂರು ; ಲೇಡಿಸ್ ಪಿಜಿಗೆ...
24-07-24 05:09 pm
Ramnagara rape, crime: ಐಸ್ಕ್ರೀಮ್ ಕೊಡಿಸೋ ನೆಪ...
23-07-24 03:03 pm