ಬ್ರೇಕಿಂಗ್ ನ್ಯೂಸ್
01-12-23 10:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅದರಿಂದಲೇ ರಾಜ್ಯದಲ್ಲಿ ಬಾಂಬ್ ಬೆದರಿಕೆ ಹೆಚ್ಚುತ್ತಿವೆ ಎಂದು ಬಿಜೆಪಿ ಶಾಸಕ ಎನ್ ಮುನಿರತ್ನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ. ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು.
ಸ್ಪೀಕರ್ ಕೂರುವ ಜಾಗದಲ್ಲಿ ಅಶೋಕ ಸ್ತಂಭ, ಸೂರ್ಯ, ಚಂದ್ರ ಇದೆ. ಕುರ್ಚಿಯಲ್ಲಿ ಕೂರುವ ವ್ಯಕ್ತಿಗೆ ಗೌರವ ಕೊಡ್ತೀವೋ ಇಲ್ಲವೋ ಗೊತ್ತಿಲ್ಲ. ಆ ಅಶೋಕ ಸ್ತಂಭ, ಸೂರ್ಯ, ಚಂದ್ರ ಇವುಗಳಿಗಂತೂ ಕೈ ಮುಗೀತೀವಿ. ಪೀಠಕ್ಕೆ ಇಂತಹ ಅಗೌರವ ತೋರುವ ವ್ಯಕ್ತಿಗಳಿಂದಲೇ ಬಾಂಬ್ ಬೆದರಿಕೆ ಬರ್ತಿದೆ ಎಂದು ಮುನಿರತ್ನ ಹೇಳಿದರು.
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಬೆದರಿಕೆ ;
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಶುಕ್ರವಾರ ಮುಂಜಾನೆ 6 ಗಂಟೆ ಮತ್ತು 9 ಗಂಟೆಯ ನಡುವೆ ಈ-ಮೇಲ್ಗಳು ಬಂದಿದ್ದು, ಅದರಲ್ಲಿ ಶಾಲೆಯ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಲಾಗಿತ್ತು. ಅಪ್ಪಟ ಉಗ್ರಗಾಮಿಗಳ ಭಾಷೆಯಲ್ಲಿರುವ ಈ ಪತ್ರದಲ್ಲಿ ಒಂದೋ ನೀವು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕು. ಇಲ್ಲವಾದರೆ ನಿಮ್ಮನ್ನು, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಆದರೆ, ಯಾವುದೇ ಶಾಲೆಗಳ ಆವರಣದಲ್ಲಿ ಇದುವರೆಗೆ ಬಾಂಬ್ ಪತ್ತೆಯಾಗಿಲ್ಲ.
BJP Mla Munirathna sparks controversy on Bomb Email to schools in Bangalore about Congress. Says Congress supports terror activities.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 07:54 pm
Udupi Staffer
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm