ಬ್ರೇಕಿಂಗ್ ನ್ಯೂಸ್
01-12-23 10:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅದರಿಂದಲೇ ರಾಜ್ಯದಲ್ಲಿ ಬಾಂಬ್ ಬೆದರಿಕೆ ಹೆಚ್ಚುತ್ತಿವೆ ಎಂದು ಬಿಜೆಪಿ ಶಾಸಕ ಎನ್ ಮುನಿರತ್ನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ. ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು.
ಸ್ಪೀಕರ್ ಕೂರುವ ಜಾಗದಲ್ಲಿ ಅಶೋಕ ಸ್ತಂಭ, ಸೂರ್ಯ, ಚಂದ್ರ ಇದೆ. ಕುರ್ಚಿಯಲ್ಲಿ ಕೂರುವ ವ್ಯಕ್ತಿಗೆ ಗೌರವ ಕೊಡ್ತೀವೋ ಇಲ್ಲವೋ ಗೊತ್ತಿಲ್ಲ. ಆ ಅಶೋಕ ಸ್ತಂಭ, ಸೂರ್ಯ, ಚಂದ್ರ ಇವುಗಳಿಗಂತೂ ಕೈ ಮುಗೀತೀವಿ. ಪೀಠಕ್ಕೆ ಇಂತಹ ಅಗೌರವ ತೋರುವ ವ್ಯಕ್ತಿಗಳಿಂದಲೇ ಬಾಂಬ್ ಬೆದರಿಕೆ ಬರ್ತಿದೆ ಎಂದು ಮುನಿರತ್ನ ಹೇಳಿದರು.
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಬೆದರಿಕೆ ;
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಶುಕ್ರವಾರ ಮುಂಜಾನೆ 6 ಗಂಟೆ ಮತ್ತು 9 ಗಂಟೆಯ ನಡುವೆ ಈ-ಮೇಲ್ಗಳು ಬಂದಿದ್ದು, ಅದರಲ್ಲಿ ಶಾಲೆಯ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಲಾಗಿತ್ತು. ಅಪ್ಪಟ ಉಗ್ರಗಾಮಿಗಳ ಭಾಷೆಯಲ್ಲಿರುವ ಈ ಪತ್ರದಲ್ಲಿ ಒಂದೋ ನೀವು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕು. ಇಲ್ಲವಾದರೆ ನಿಮ್ಮನ್ನು, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಆದರೆ, ಯಾವುದೇ ಶಾಲೆಗಳ ಆವರಣದಲ್ಲಿ ಇದುವರೆಗೆ ಬಾಂಬ್ ಪತ್ತೆಯಾಗಿಲ್ಲ.
BJP Mla Munirathna sparks controversy on Bomb Email to schools in Bangalore about Congress. Says Congress supports terror activities.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 02:44 pm
HK News Staffer
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm