ಬ್ರೇಕಿಂಗ್ ನ್ಯೂಸ್
01-12-23 10:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅದರಿಂದಲೇ ರಾಜ್ಯದಲ್ಲಿ ಬಾಂಬ್ ಬೆದರಿಕೆ ಹೆಚ್ಚುತ್ತಿವೆ ಎಂದು ಬಿಜೆಪಿ ಶಾಸಕ ಎನ್ ಮುನಿರತ್ನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ. ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು.
ಸ್ಪೀಕರ್ ಕೂರುವ ಜಾಗದಲ್ಲಿ ಅಶೋಕ ಸ್ತಂಭ, ಸೂರ್ಯ, ಚಂದ್ರ ಇದೆ. ಕುರ್ಚಿಯಲ್ಲಿ ಕೂರುವ ವ್ಯಕ್ತಿಗೆ ಗೌರವ ಕೊಡ್ತೀವೋ ಇಲ್ಲವೋ ಗೊತ್ತಿಲ್ಲ. ಆ ಅಶೋಕ ಸ್ತಂಭ, ಸೂರ್ಯ, ಚಂದ್ರ ಇವುಗಳಿಗಂತೂ ಕೈ ಮುಗೀತೀವಿ. ಪೀಠಕ್ಕೆ ಇಂತಹ ಅಗೌರವ ತೋರುವ ವ್ಯಕ್ತಿಗಳಿಂದಲೇ ಬಾಂಬ್ ಬೆದರಿಕೆ ಬರ್ತಿದೆ ಎಂದು ಮುನಿರತ್ನ ಹೇಳಿದರು.
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಬೆದರಿಕೆ ;
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಶುಕ್ರವಾರ ಮುಂಜಾನೆ 6 ಗಂಟೆ ಮತ್ತು 9 ಗಂಟೆಯ ನಡುವೆ ಈ-ಮೇಲ್ಗಳು ಬಂದಿದ್ದು, ಅದರಲ್ಲಿ ಶಾಲೆಯ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಲಾಗಿತ್ತು. ಅಪ್ಪಟ ಉಗ್ರಗಾಮಿಗಳ ಭಾಷೆಯಲ್ಲಿರುವ ಈ ಪತ್ರದಲ್ಲಿ ಒಂದೋ ನೀವು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕು. ಇಲ್ಲವಾದರೆ ನಿಮ್ಮನ್ನು, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಆದರೆ, ಯಾವುದೇ ಶಾಲೆಗಳ ಆವರಣದಲ್ಲಿ ಇದುವರೆಗೆ ಬಾಂಬ್ ಪತ್ತೆಯಾಗಿಲ್ಲ.
BJP Mla Munirathna sparks controversy on Bomb Email to schools in Bangalore about Congress. Says Congress supports terror activities.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am