ಬ್ರೇಕಿಂಗ್ ನ್ಯೂಸ್
01-12-23 10:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅದರಿಂದಲೇ ರಾಜ್ಯದಲ್ಲಿ ಬಾಂಬ್ ಬೆದರಿಕೆ ಹೆಚ್ಚುತ್ತಿವೆ ಎಂದು ಬಿಜೆಪಿ ಶಾಸಕ ಎನ್ ಮುನಿರತ್ನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ. ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು.
ಸ್ಪೀಕರ್ ಕೂರುವ ಜಾಗದಲ್ಲಿ ಅಶೋಕ ಸ್ತಂಭ, ಸೂರ್ಯ, ಚಂದ್ರ ಇದೆ. ಕುರ್ಚಿಯಲ್ಲಿ ಕೂರುವ ವ್ಯಕ್ತಿಗೆ ಗೌರವ ಕೊಡ್ತೀವೋ ಇಲ್ಲವೋ ಗೊತ್ತಿಲ್ಲ. ಆ ಅಶೋಕ ಸ್ತಂಭ, ಸೂರ್ಯ, ಚಂದ್ರ ಇವುಗಳಿಗಂತೂ ಕೈ ಮುಗೀತೀವಿ. ಪೀಠಕ್ಕೆ ಇಂತಹ ಅಗೌರವ ತೋರುವ ವ್ಯಕ್ತಿಗಳಿಂದಲೇ ಬಾಂಬ್ ಬೆದರಿಕೆ ಬರ್ತಿದೆ ಎಂದು ಮುನಿರತ್ನ ಹೇಳಿದರು.
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಬೆದರಿಕೆ ;
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಶುಕ್ರವಾರ ಮುಂಜಾನೆ 6 ಗಂಟೆ ಮತ್ತು 9 ಗಂಟೆಯ ನಡುವೆ ಈ-ಮೇಲ್ಗಳು ಬಂದಿದ್ದು, ಅದರಲ್ಲಿ ಶಾಲೆಯ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಲಾಗಿತ್ತು. ಅಪ್ಪಟ ಉಗ್ರಗಾಮಿಗಳ ಭಾಷೆಯಲ್ಲಿರುವ ಈ ಪತ್ರದಲ್ಲಿ ಒಂದೋ ನೀವು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕು. ಇಲ್ಲವಾದರೆ ನಿಮ್ಮನ್ನು, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಆದರೆ, ಯಾವುದೇ ಶಾಲೆಗಳ ಆವರಣದಲ್ಲಿ ಇದುವರೆಗೆ ಬಾಂಬ್ ಪತ್ತೆಯಾಗಿಲ್ಲ.
BJP Mla Munirathna sparks controversy on Bomb Email to schools in Bangalore about Congress. Says Congress supports terror activities.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm