ಬ್ರೇಕಿಂಗ್ ನ್ಯೂಸ್
03-12-23 11:12 am HK News Desk ಕರ್ನಾಟಕ
ಮೈಸೂರು, ಡಿ.3: ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಪಕ್ಷದ ಸಂಘಟನೆಯಿಂದ ದೂರವಿಟ್ಟರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಉದ್ದಾರವಾಗಲಿದೆ ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಯಾರದ್ದೇ ಹೆಸರೇಳದೆ ಟಾಂಗ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗುಂಪುಗಾರಿಕೆ ರಾಜಕಾರಣ ನಿಲ್ಲಬೇಕಿದೆ, ನಮ್ಮ ಗುಂಪುಗಾರಿಕೆಯಿಂದಲೇ ನಾವು ಚುನಾವಣೆ ಸೋತಿರುವುದು. ಹೀಗಾಗಿ ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಸಂಘಟನೆಯಿಂದ ದೂರವಿಡಿ, ಆಗ ರಾಜ್ಯದಲ್ಲಿ ಪಕ್ಷ ಉದ್ದಾರ ಆಗುತ್ತದೆ. ಈ ಬಗ್ಗೆ ನಾನು ವಿಜಯೇಂದ್ರ ಅವರಿಗೆ ಸಲಹೆ ನೀಡಿದ್ದೇನೆ ಎಂದು ಹೇಳಿದರು. ಮೊದಲು ಅಸಮಾಧಾನ ಇರುವವರನ್ನು ಮನವೊಲಿಸಿ, ಸೋಮಣ್ಣ ಅವರ ಬಳಿ ಹೋಗಿ, ಯತ್ನಾಳ್ ಅವರನ್ನು ಭೇಟಿ ಮಾಡಿದ ಬಳಿಕ ಮಠ, ಮಂದಿರಕ್ಕೆ ಹೋಗಿ ಎಂದು ಸಲಹೆ ಮಾಡಿದರು.
ನನಗೆ ರಾಜ್ಯಾಧ್ಯಕ್ಷರಾಗಿರುವವರ ಕಷ್ಟ ಏನೆಂಬುದು ಗೊತ್ತಿದೆ. ನನ್ನ ಅವಧಿಯಲ್ಲಿಯೂ ಅನಂತ ಕುಮಾರ್, ಯಡಿಯೂರಪ್ಪ ಅವರ ಗುಂಪುಗಳಿದ್ದವು. ನಾನು ಪ್ರತಿ ದಿನ ಎಲ್ಲರ ಮನೆಗೆ ಹೋಗಿ ಬೆಣ್ಣೆ ಹಿಡಿದು ನೈಸ್ ಮಾಡಿದ್ದೆ, ಅದೇ ರೀತಿ ಎಲ್ಲರ ಮನವೊಲಿಸಿ. ನಿಮ್ಮ ತಂದೆಯ ಜತೆಗೆ ಉಳಿದ ಹಿರಿಯರ ಸಲಹೆ ಪಡೆಯಿರಿ ಎಂದ ಅವರು, ಮುಂದಿನ ಲೋಕಸಭೆಯಲ್ಲಿ ಯುವಕರಿಗೆ ಅವಕಾಶ ನೀಡುವ ಮೂಲಕ ಹೊಸ ರಾಜತಂತ್ರ ಜಾರಿಗೆ ತನ್ನಿ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸದಾನಂದ ಗೌಡ, ”ನನ್ನ ರಾಜಕೀಯ ಜೀವನದಲ್ಲಿ ಇಂತಹ ಸರಕಾರ ನೋಡಿಲ್ಲ. ನಾನು ಎಲ್ಲಾ ರೀತಿಯ ಅಧಿಕಾರ ಅನುಭವಿಸಿದ್ದೇನ, ಆದರೆ ಈ ರೀತಿಯ ಸರಕಾರ ನೋಡಿಲ್ಲ. ಇದು ಕರ್ನಾಟಕದ ಜನರ ಪಾಪಕ್ಕೆ ಬಂದ ಸರಕಾರವಾಗಿದ್ದು, ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ಡಿ.ಕೆ. ಶಿವಕುಮಾರ್ ಅವರ ಮೇಲಿನ ಸಿಬಿಐ ತನಿಖೆಯನ್ನು ಹಿಂಪಡೆದ ನಿರ್ಧಾರದ ಬಗ್ಗೆ ಮಾತನಾಡಿ, ”ನಾನೂ ಕಾನೂನು ಮಂತ್ರಿಯಾಗಿದ್ದವನು, ಈ ರೀತಿಯ ಕೆಲಸ ಸರಕಾರ ಮಾಡಬಾರದು. ಈ ವಿಷಯದಲ್ಲಿ ಸಿದ್ದರಾಮಯ್ಯ ಅವರಿಗೂ ತೃಪ್ತಿ ಇಲ್ಲ ಎಂದರು.
D.V. Sadananda Gowda in Mysuru, says stop having group politics slams members and that's the reason we have lost our power in Karnataka he added.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm