ಬ್ರೇಕಿಂಗ್ ನ್ಯೂಸ್
03-12-23 05:12 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 03: ಪಂಚ ರಾಜ್ಯಗಳಿಗೆ ನಡೆದ ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದೆ. ಇಂದು ನಾಲ್ಕು ರಾಜ್ಯಗಳ ಫಲಿತಾಂಶ ಹೊರ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ದೇಶವನ್ನು ಆಳುವ ನಾಯಕತ್ವ ಬಿಜೆಪಿ ಬಿಟ್ಟು ಇತರ ಪಕ್ಷಗಳಲ್ಲಿಲ್ಲ ಎನ್ನುವುದನ್ನು ಫಲಿತಾಂಶ ಸ್ಪಷ್ಟಪಡಿಸಿದೆ. ಮೋದಿ ನಾಯಕತ್ವಕ್ಕೆ ಜನರು ಜೈ ಅಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲ ಸ್ಥಾನಗಳನ್ನು ಗೆದ್ದು ಮೋದಿ ಅವರಿಗೆ ಉಡುಗೊರೆಯಾಗಿ ನೀಡುತ್ತೇವೆ ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕ ಡಿಯೂರಪ್ಪ ತಿಳಿಸಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸ ಧವಳಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಸ್ಥಾನದಲ್ಲಿ 115 ಸೀಟುಗಳನ್ನು ಪಡೆದಿದ್ದೇವೆ. ಅಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು, ಇದೀಗ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಮಧ್ಯಪ್ರದೇಶದಲ್ಲಿ 161 ಸ್ಥಾನ ಪಡೆದು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದೇವೆ. ಛತ್ತೀಸ್ಗಢದಲ್ಲಿ 52 ಸ್ಥಾನಗಳನ್ನು ಪಡೆದು ಗೆಲುವಿನತ್ತ ದಾಪುಗಾಲು ಹಾಕಿದ್ದೇವೆ. ತೆಲಂಗಾಣದಲ್ಲಿ 8 ಸ್ಥಾನಗಳನ್ನು ಪಡೆದು ಹಿಂದೆಂದಿಗಿಂತಲೂ ಉತ್ತಮ ಪ್ರದರ್ಶನ ನೀಡಿದ್ದೇವೆ. ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಾರಣ. ಹಾಗಾಗಿ ಆ ಮೂವರಿಗೂ ನಾನು ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಹೇಳಿದರು.
ಕರ್ನಾಟಕದಲ್ಲಿ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಮೋದಿ ಅವರಿಗೆ ನಮ್ಮ ಕೊಡುಗೆ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಈ ಅಧಿವೇಶನ ಮುಗಿದ ನಂತರ ರಾಜ್ಯದ ಉದ್ದಗಲಕ್ಕೂ ಪ್ರವಾಸ ಕೈಗೊಳ್ಳುತ್ತೇವೆ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಎಲ್ಲ ಕಡೆಗಳಲ್ಲೂ ಬಹಳ ದೊಡ್ಡ ಸ್ವಾಗತ ಸಿಕ್ಕಿದೆ. ಜನರಲ್ಲಿ ವಿಶ್ವಾಸ ಮೂಡಿದೆ. ಅದರ ಲಾಭವನ್ನು ಪಡೆದು ಪಕ್ಷವನ್ನು ಬಲಪಡಿಸಲಿದ್ದೇವೆ. ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ ಎಸ್ಸಿ, ಎಸ್ಟಿ, ಒಬಿಸಿಯನ್ನು ನಮ್ಮ ಜೊತೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ಕಾಂಗ್ರೆಸ್ ಧೂಳಿಪಟ ಮಾಡುವ ಪ್ರಯತ್ನಕ್ಕೆ ಇಂದಿನ ಫಲಿತಾಂಶ ನಾಂದಿ ಹಾಕಿದೆ. ಈ ಕಾಂಗ್ರೆಸ್ ಸರ್ಕಾರದ ವೈಫಲ್ಯತೆಗಳನ್ನು ಇಟ್ಟುಕೊಂಡು ಮುಂದಿನ ಅಧಿವೇಶನದಲ್ಲಿ ಸಾಕಷ್ಟು ಚರ್ಚೆಗಳನ್ನು ನಮ್ಮ ಶಾಸಕರು ಮಾಡಲಿದ್ದಾರೆ. ಇದರ ಜೊತೆಗೆ ಸಂಘಟನಾತ್ಮಕವಾಗಿಯೂ ಬಲಗೊಳ್ಳುವ ಮೂಲಕ ಲೋಕಸಭೆ ಗೆಲ್ಲುವ ಕಡೆ ಗಮನ ಹರಿಸಲಿದ್ದೇವ ಎಂದು ಅವರು ಇದೇ ವೇಳೆ ಹೇಳಿದರು. ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
Assembly Election Results 2023, this is the power of modi leadership says BS Yediyurappa in Bangalore. There is no powerful party in India as like BJP he added.
05-05-24 04:17 pm
Bangalore Correspondent
Annamalai, Prajwal Revanna: ಎಸ್ಐಟಿ ಮೊದಲು ಈ ವಿ...
04-05-24 10:13 pm
Prajwal Revanna Sex Case: ಬಂಧನ ಭೀತಿಯಲ್ಲಿ ದೇಶದ...
04-05-24 09:43 pm
MLA HD Revanna arrested: ಲೈಂಗಿಕ ಕಿರುಕುಳ ಪ್ರಕರ...
04-05-24 07:56 pm
LR Sivaram Gowda, Prajwal Revanna: ರೇವಣ್ಣ ಒಳ್...
04-05-24 07:10 pm
05-05-24 11:51 am
HK News Desk
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
C V Ananda Bose, West Bengal governor: ಪಶ್ಚಿಮ...
03-05-24 10:58 pm
05-05-24 06:43 pm
Mangalore Correspondent
Mangalore accident, Thokottu: ನಿಯಂತ್ರಣ ತಪ್ಪಿದ...
05-05-24 01:26 pm
Highest temperature in Mangalore: ಕರಾವಳಿಯ ಉಪ್...
04-05-24 09:50 pm
Puttur news, Ramchandra officer: ವರ್ಗಾವಣೆ ಆದೇ...
04-05-24 08:45 pm
Mangalore airport, Bomb threat mail: ಮಂಗಳೂರು...
04-05-24 12:41 pm
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm