ಬ್ರೇಕಿಂಗ್ ನ್ಯೂಸ್
03-12-23 06:59 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 03: ಚುನಾವಣೋತ್ತರ ಸಮೀಕ್ಷೆಯಂತೆ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಕಾಂಗ್ರೆಸ್ನ ಈ ಜಯದ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ನಮ್ಮ ರಾಜ್ಯದ ಕಾಂಗ್ರೆಸ್ ನಾಯಕರ ಪ್ರಚಾರದಿಂದ ಅಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಇಲ್ಲಿಂದ ಅಲ್ಲಿಗೆ ರವಾನೆಯಾದ ಹಣದಿಂದ ಗೆದ್ದಿದ್ದಾರೆ. ನಾನಾ ರೀತಿಯ ತೀರ್ಮಾನಗಳಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
loadedಜೆಡಿಎಸ್ ಪಕ್ಷ ರಾಜ್ಯ ವ್ಯಾಪಿ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಿದರು. ರಾಜಭವನಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ಔಪಚಾರಿಕವಾಗಿ ರಾಜ್ಯಪಾಲರ ಜೊತೆ ಕೆಲಕಾಲ ಬರ ಸ್ಥಿತಿಗತಿ ಕುರಿತು ಚರ್ಚಿಸಿತು. ಅಧ್ಯಯನ ವರದಿ ಸಲ್ಲಿಸಿ ಬರ ಪರಿಹಾರ ಕುರಿತು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದೆ.
ರಾಜ್ಯಪಾಲರ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಲು ನಾನಾ ಕಾರಣಗಳಿವೆ. ಅದು ಅಲ್ಲಿಯ ಕಾಂಗ್ರೆಸ್ ಶಕ್ತಿಯಲ್ಲ. ಕರ್ನಾಟಕ ಕಾಂಗ್ರೆಸ್ ನಾಯಕರ ಪ್ರಚಾರವೂ ಕಾರಣವಲ್ಲ. ಇಲ್ಲಿಂದ ರವಾನೆಯಾದ ಆರ್ಥಿಕ ಚೀಲಗಳು ಕಾರಣ. ಅಲ್ಲಿನ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲೆ ಬರೋದಕ್ಕೆ ಯಾವೆಲ್ಲ ಬೆಳವಣಿಗೆಗಳು ಆದವು ಅನ್ನೋದು ಗೊತ್ತಿದೆ. ಐದಕ್ಕೆ ಐದು ರಾಜ್ಯಗಳನ್ನು ಆವರಿಸಿಕೊಂಡು ಬಿಡುತ್ತೇವೆ ಅನ್ನೊ ಕಾಂಗ್ರೆಸ್ ನಾಯಕರ ಮಾತಿಗೆ ಜನ ತೀರ್ಪು ನೀಡಿದ್ದಾರೆ ಎಂದರು
ಜೆಡಿಎಸ್ ಪಕ್ಷದ ಶಾಸಕರು ಹಾಗು ಮಾಜಿ ಶಾಸಕರು ಜಿಲ್ಲಾ ಪದಾಧಿಕಾರಿಗಳು ಪ್ರವಾಸ ಮಾಡಿ ಬರ ಅಧ್ಯಯನ ವರದಿಯನ್ನು ಸಿದ್ಧಪಡಿಸಿದ್ದಾರೆ. ಬರ ವಿಚಾರವಾಗಿ ರೈತರ ಮೇಲಿನ ದುಷ್ಪರಿಣಾಮಗಳು ಏನು? ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ನಮ್ಮ ಪಕ್ಷದ ಗ್ರೌಂಡ್ ರಿಯಾಲಿಟಿಯ ವರದಿಯನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ಕೇಂದ್ರ ಗೃಹ ಸಚಿವರು, ಪ್ರಧಾನಿ ಹಾಗೂ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಮೂಲಕ ಸಲ್ಲಿಸಿದ್ದೇವೆ. ಆದಷ್ಟು ಬೇಗ ಎನ್ಡಿಆರ್ಎಫ್ ನಿಂದ ಹಣ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯದ ಪರವಾಗಿ ಮನವಿ ಮಾಡುತ್ತೇನೆ ಎಂದು ರಾಜ್ಯಪಾಲರು ಹೇಳಿದ್ದಾರೆ ಎಂದು ಹೆಚ್ಡಿಕೆ ತಿಳಿಸಿದರು.
The Congress has emerged victorious in the Telangana Assembly elections, according to exit polls. JD(S) state president and former chief minister HD Kumaraswamy reacted to the Congress' victory.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm