ಬ್ರೇಕಿಂಗ್ ನ್ಯೂಸ್
04-12-23 06:49 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 04: ಚುನಾವಣಾ ಅಫಿಡೇವಿಟ್ನಲ್ಲಿ ತಪ್ಪು ಮಾಹಿತಿ ನೀಡಿ ವಂಚಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸಿ.ಎಸ್ಸಿದ್ದರಾಜು ಎನ್ನುವರು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು 2004ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಕೇತಗಾನಹಳ್ಳಿ ಗ್ರಾಮದಲ್ಲಿ 24 ಎಕರೆ ಜಮೀನು ಇದೆ ಎಂದು ಹೇಳಿಕೊಂಡಿದ್ದಾರೆ. ಅವರು ಈಗ್ಗೆ ಕೆಲವು ದಿನಗಳ ಹಿಂದೆ ಮಾಧ್ಯಮದಲ್ಲಿ ಮಾತನಾಡುತ್ತಾ, ವಿವಿಧ ಸರ್ವೆ ನಂ.ಗಳಲ್ಲಿ 1,2,3,4 ಎಕರೆ ಯಂತೆ ವಿವಿಧ ಮೊತ್ತಕ್ಕೆ ಜಮೀನು ಖರೀದಿ ಮಾಡಿದ್ದೇವೆ. ತನ್ನ ತಾಯಿಯ ಸಹೋದರಿ ಶ್ರೀಮತಿ ಸಾವಿತ್ರಮ್ಮರವರಿಂದ ಪಡೆದಿರುವುದಾಗಿಯೂ ಹೇಳಿಕೊಂಡಿದ್ದಾರೆ.
2008 ಹಾಗೂ 2018ರ ಚುನಾವಣೆಯ ಅಫಿಡವಿಟ್ ನಲ್ಲಿ ಬೆಂಗಳೂರಿನ ಜೆಪಿ ನಗರದ ಮನೆಯನ್ನ ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ರ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅದೇ ಮನೆಯನ್ನ 1995ರಲ್ಲಿ ಖರೀದಿಸಿರುವ ಬಗ್ಗೆ ಮಾಹಿತಿ ಇದೆ. ಅನಿತಾ ಕುಮಾರಸ್ವಾಮಿಯವರು ಕುಪೇಂದ್ರ ರೆಡ್ಡಿಯವರಿಂದ 9 ಕೋಟಿ 50 ಲಕ್ಷ ಸಾಲಪಡೆರುವುದಾಗಿ ಹೇಳಿದ್ದಾರೆ. ಆದ್ರೆ, 2022 ರಲ್ಲಿ ಕುಪೇಂದ್ರರೆಡ್ಡಿಯವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.
ಪೂರ್ಣ ಪ್ರಮಾಣದ ಮಾಹಿತಿಯನ್ನು ನೀಡದೇ ವಂಚಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ದಯಾಪರರಾದ ತಾವುಗಳು ಸೂಕ್ತ ತನಿಖೆಯನ್ನು ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ವಿನಂತಿಸುತ್ತೇನೆ ಎಂದು ಸಿದ್ದರಾಜು ಅವರು ದೂರು ಸಲ್ಲಿಕೆ ಮಾಡಿದ್ದಾರೆ.
Lokayukta case filed by social activist against H D Kumaraswamy for giving wrong information on his affidavit.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am