ಬ್ರೇಕಿಂಗ್ ನ್ಯೂಸ್
04-12-23 08:56 pm HK News Desk ಕರ್ನಾಟಕ
ಬೆಳಗಾವಿ, ಡಿ.4: ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು ಜನವರಿಯಿಂದ ಶಾಲೆ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೇ ಮೊದಲ ಬಾರಿಗೆ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್ ಗಳನ್ನ ವಿತರಿಸಲು ನಿರ್ಧರಿಸಲಾಗಿದೆ ಎಂದರು.
ಶುಚಿ ಒಂದು ಮಹತ್ವವಾದ ಯೋಜನೆ. ಹೆಣ್ಣುಮಕ್ಕಳಿಗೆ ಇದು ಅತ್ಯಗತ್ಯವಾಗಿದೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಬೇರೆ ಬೇರೆ ಕಾರಣಗಳಿಗೆ ಯೋಜನೆ ಸ್ಥಗಿತವಾಗಿತ್ತು. ನಮ್ಮ ಸರ್ಕಾರ ಬಂದ ಬಳಿಕ ಶುಚಿ ಯೋಜನೆಗೆ ಮರುಚಾಲನೆ ನೀಡುತ್ತಿದ್ದೇವೆ. ಈಗಾಗಲೇ ನಾಲ್ಕು ವಿಭಾಗವಾರು ಟೆಂಡರ್ ಆಹ್ವಾನಿಸಿ ಬಹುತೇಕ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.
10 ವರ್ಷದಿಂದ 18 ವರ್ಷದ ಒಳಗಿನ ಸುಮಾರು 19 ಲಕ್ಷ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲು ಯೋಜಿಸಲಾಗಿದೆ. ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳಿಗು ನ್ಯಾಪ್ಕಿನ್ ಗಳನ್ನ ವಿತರಿಸಲಾಗುವುದು. ಈ ಮೊದಲು ಸರ್ಕಾರಿ ಆಸ್ಪತ್ರೆಯ ಮೂಲಕ ನ್ಯಾಪ್ಕಿನ್ ಗಳನ್ನ ವಿತರಿಸಲಾಗುತ್ತಿತ್ತು. ಈ ಬಾರಿ ನೇರವಾಗಿ ಶಾಲೆಗೆ ತೆರಳಿ ವಿದ್ಯಾರ್ಥಿನಿಯರಿಗೆ ನ್ಯಾಪ್ಕನ್ ಗಳನ್ನ ವಿತರಿಸುವಂತೆ ಏಜನ್ಸಿಯವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
40.50 ಕೋಟಿ ಯೋಜನೆ ಇದಾಗಿದ್ದು, ಸಂಪೂರ್ಣ ಹಣಕಾಸನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ. ಕೇಂದ್ರ ಸರ್ಕಾರದಿಂದ ಈ ಯೋಜನೆಗೆ ನೆರವು ಸಿಕ್ಕಿಲ್ಲ ಎಂದು ಸ್ಪಷ್ಟಪಡಿಸಿದ ಗುಂಡೂರಾವ್, ಪ್ರಾಯೋಗಿಕವಾಗಿ ಮೆನ್ ಸ್ಟ್ರುವಲ್ ಮುಟ್ಟಿನ ಕಪ್ ಗಳನ್ನ ದಕ್ಷಿಣ ಕನ್ನಡ, ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 15 ಸಾವಿರ ಮುಟ್ಟಿನ ಕಪ್ ಗಳನ್ನ ವಿತರಿಸಲಾಗಿದೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has said that the swachhta scheme, which was stalled for four years, will be revived and napkins will be distributed to school girls from January.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm