ಬ್ರೇಕಿಂಗ್ ನ್ಯೂಸ್
04-12-23 08:56 pm HK News Desk ಕರ್ನಾಟಕ
ಬೆಳಗಾವಿ, ಡಿ.4: ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು ಜನವರಿಯಿಂದ ಶಾಲೆ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೇ ಮೊದಲ ಬಾರಿಗೆ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್ ಗಳನ್ನ ವಿತರಿಸಲು ನಿರ್ಧರಿಸಲಾಗಿದೆ ಎಂದರು.
ಶುಚಿ ಒಂದು ಮಹತ್ವವಾದ ಯೋಜನೆ. ಹೆಣ್ಣುಮಕ್ಕಳಿಗೆ ಇದು ಅತ್ಯಗತ್ಯವಾಗಿದೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಬೇರೆ ಬೇರೆ ಕಾರಣಗಳಿಗೆ ಯೋಜನೆ ಸ್ಥಗಿತವಾಗಿತ್ತು. ನಮ್ಮ ಸರ್ಕಾರ ಬಂದ ಬಳಿಕ ಶುಚಿ ಯೋಜನೆಗೆ ಮರುಚಾಲನೆ ನೀಡುತ್ತಿದ್ದೇವೆ. ಈಗಾಗಲೇ ನಾಲ್ಕು ವಿಭಾಗವಾರು ಟೆಂಡರ್ ಆಹ್ವಾನಿಸಿ ಬಹುತೇಕ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.
10 ವರ್ಷದಿಂದ 18 ವರ್ಷದ ಒಳಗಿನ ಸುಮಾರು 19 ಲಕ್ಷ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲು ಯೋಜಿಸಲಾಗಿದೆ. ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳಿಗು ನ್ಯಾಪ್ಕಿನ್ ಗಳನ್ನ ವಿತರಿಸಲಾಗುವುದು. ಈ ಮೊದಲು ಸರ್ಕಾರಿ ಆಸ್ಪತ್ರೆಯ ಮೂಲಕ ನ್ಯಾಪ್ಕಿನ್ ಗಳನ್ನ ವಿತರಿಸಲಾಗುತ್ತಿತ್ತು. ಈ ಬಾರಿ ನೇರವಾಗಿ ಶಾಲೆಗೆ ತೆರಳಿ ವಿದ್ಯಾರ್ಥಿನಿಯರಿಗೆ ನ್ಯಾಪ್ಕನ್ ಗಳನ್ನ ವಿತರಿಸುವಂತೆ ಏಜನ್ಸಿಯವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
40.50 ಕೋಟಿ ಯೋಜನೆ ಇದಾಗಿದ್ದು, ಸಂಪೂರ್ಣ ಹಣಕಾಸನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ. ಕೇಂದ್ರ ಸರ್ಕಾರದಿಂದ ಈ ಯೋಜನೆಗೆ ನೆರವು ಸಿಕ್ಕಿಲ್ಲ ಎಂದು ಸ್ಪಷ್ಟಪಡಿಸಿದ ಗುಂಡೂರಾವ್, ಪ್ರಾಯೋಗಿಕವಾಗಿ ಮೆನ್ ಸ್ಟ್ರುವಲ್ ಮುಟ್ಟಿನ ಕಪ್ ಗಳನ್ನ ದಕ್ಷಿಣ ಕನ್ನಡ, ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 15 ಸಾವಿರ ಮುಟ್ಟಿನ ಕಪ್ ಗಳನ್ನ ವಿತರಿಸಲಾಗಿದೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has said that the swachhta scheme, which was stalled for four years, will be revived and napkins will be distributed to school girls from January.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm