ಬ್ರೇಕಿಂಗ್ ನ್ಯೂಸ್
04-12-23 08:56 pm HK News Desk ಕರ್ನಾಟಕ
ಬೆಳಗಾವಿ, ಡಿ.4: ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು ಜನವರಿಯಿಂದ ಶಾಲೆ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೇ ಮೊದಲ ಬಾರಿಗೆ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್ ಗಳನ್ನ ವಿತರಿಸಲು ನಿರ್ಧರಿಸಲಾಗಿದೆ ಎಂದರು.
ಶುಚಿ ಒಂದು ಮಹತ್ವವಾದ ಯೋಜನೆ. ಹೆಣ್ಣುಮಕ್ಕಳಿಗೆ ಇದು ಅತ್ಯಗತ್ಯವಾಗಿದೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಬೇರೆ ಬೇರೆ ಕಾರಣಗಳಿಗೆ ಯೋಜನೆ ಸ್ಥಗಿತವಾಗಿತ್ತು. ನಮ್ಮ ಸರ್ಕಾರ ಬಂದ ಬಳಿಕ ಶುಚಿ ಯೋಜನೆಗೆ ಮರುಚಾಲನೆ ನೀಡುತ್ತಿದ್ದೇವೆ. ಈಗಾಗಲೇ ನಾಲ್ಕು ವಿಭಾಗವಾರು ಟೆಂಡರ್ ಆಹ್ವಾನಿಸಿ ಬಹುತೇಕ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.
10 ವರ್ಷದಿಂದ 18 ವರ್ಷದ ಒಳಗಿನ ಸುಮಾರು 19 ಲಕ್ಷ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲು ಯೋಜಿಸಲಾಗಿದೆ. ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳಿಗು ನ್ಯಾಪ್ಕಿನ್ ಗಳನ್ನ ವಿತರಿಸಲಾಗುವುದು. ಈ ಮೊದಲು ಸರ್ಕಾರಿ ಆಸ್ಪತ್ರೆಯ ಮೂಲಕ ನ್ಯಾಪ್ಕಿನ್ ಗಳನ್ನ ವಿತರಿಸಲಾಗುತ್ತಿತ್ತು. ಈ ಬಾರಿ ನೇರವಾಗಿ ಶಾಲೆಗೆ ತೆರಳಿ ವಿದ್ಯಾರ್ಥಿನಿಯರಿಗೆ ನ್ಯಾಪ್ಕನ್ ಗಳನ್ನ ವಿತರಿಸುವಂತೆ ಏಜನ್ಸಿಯವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
40.50 ಕೋಟಿ ಯೋಜನೆ ಇದಾಗಿದ್ದು, ಸಂಪೂರ್ಣ ಹಣಕಾಸನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ. ಕೇಂದ್ರ ಸರ್ಕಾರದಿಂದ ಈ ಯೋಜನೆಗೆ ನೆರವು ಸಿಕ್ಕಿಲ್ಲ ಎಂದು ಸ್ಪಷ್ಟಪಡಿಸಿದ ಗುಂಡೂರಾವ್, ಪ್ರಾಯೋಗಿಕವಾಗಿ ಮೆನ್ ಸ್ಟ್ರುವಲ್ ಮುಟ್ಟಿನ ಕಪ್ ಗಳನ್ನ ದಕ್ಷಿಣ ಕನ್ನಡ, ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 15 ಸಾವಿರ ಮುಟ್ಟಿನ ಕಪ್ ಗಳನ್ನ ವಿತರಿಸಲಾಗಿದೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has said that the swachhta scheme, which was stalled for four years, will be revived and napkins will be distributed to school girls from January.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am