ಬ್ರೇಕಿಂಗ್ ನ್ಯೂಸ್
05-12-23 05:08 pm HK News Desk ಕರ್ನಾಟಕ
ಹಾಸನ, ಡಿ 05: "ಅರ್ಜುನ ಆನೆಯನ್ನು ಅನ್ಯಾಯವಾಗಿ ಸಾಯಿಸಿದ್ರಿ; ಸತ್ತ ಮೇಲಾದರು ನ್ಯಾಯ ಕೊಡಿಸಿ " ಎಂದು ಅರಣ್ಯ ಇಲಾಖೆಗೆ ಧಿಕ್ಕಾರ ಹಾಕುತ್ತಾ ಸ್ಥಳೀಯರು ಅರ್ಜುನ ಆನೆ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ ನಡೆಸಿದರು.
ಒಂಟಿ ಸಲಗ ಸೆರೆ ಕಾರ್ಯಾಚರಣೆಯ ವೇಳೆ ಮೃತಪಟ್ಟಿದ್ದ ಅರ್ಜುನ ಆನೆಯನ್ನು ಮೃತಪಟ್ಟ ಸ್ಥಳ ಹಾಸನದ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡು ತೋಪಿನಲ್ಲಿಯೇ ಗುಂಡಿ ತೋಡಿಸಿ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಇದಕ್ಕೆ ಸ್ಥಳೀಯರು ಹಾಗೂ ಮಾವುತರು ವಿರೋಧ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳ ಅಚಾತುರ್ಯದಿಂದ ಅರ್ಜುನ ಆನೆ ಸಾವಾಗಿದೆ. ಆನೆಯ ಸಾವಿನ ನಂತರವಾದರೂ ಸೂಕ್ತ ಸ್ಥಳದಲ್ಲಿ ಅಂದರೆ, ಆನೆ ಹುಟ್ಟಿ ಬೆಳೆದ ಬಳ್ಳೆ ಸಾಕಾನೆ ಶಿಬಿರದಲ್ಲಿ ಅಂತ್ಯ ಸಂಸ್ಕಾರ ಮಾಡಿ ಸ್ಮಾರಕ ಮಾಡುವ ಮೂಲಕ ನ್ಯಾಯ ಒದಗಿಸಿ ಎಂದು ಮಾವುತವು ಹಾಗೂ ಸ್ಥಳೀಯರು ಪ್ರಾಣಿ ಪ್ರಿಯರು ಒತ್ತಾಯಿಸಿದ್ದಾರೆ. ಆದರೂ, ಅರಣ್ಯ ಇಲಾಖೆ ಕಿವಿಗೊಡದೇ ಅಂತ್ಯ ಸಂಸ್ಕಾರ ಮಾಡಿದೆ. ಸೂಕ್ತ ಸ್ಥಳದಲ್ಲಿ ಅಂತ್ಯಕ್ರಿಯೆಗೆ ಆಗ್ರಹಿಸಿದ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿ ಓಡಿಸಿದ್ದಾರೆ.

ಅರ್ಜುನ ಆನೆ ಸಾವಿನ ಬಗ್ಗೆ ಮಾವುತರೊಬ್ಬರು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
“ ಸೆರೆ ಹಿಡಿಯಬೇಕಿದ್ದ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಲು ಇಂಜೆಕ್ಷನ್ ಶೂಟ್ ಮಾಡಲಾಗಿತ್ತು. ಅದು ಗುರಿ ತಪ್ಪಿ ಪ್ರಶಾಂತ್ ಎಂಬ ಸಾಕಾನೆ ಮೇಲೆ ಬಿತ್ತು. ನಂತರ, ಬೇರೊಂದು ಇಂಜೆಕ್ಷನ್ ನೀಡಿ ಅದನ್ನು ಸುಧಾರಿಸಲಾಯಿತು. ಆ ವೇಳೆಗೆ, ಕಾಡಾನೆ ಮೇಲೆ ಅರ್ಜುನ ದಾಳಿ ಮಾಡಿತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದರು. ಆ ಗುಂಡು ಅಚಾನಕ್ಕಾಗಿ ಅರ್ಜುನನ ಕಾಲಿಗೆ ಬಿದ್ದಿತು. ಗುಂಡು ತಗುಲಿದ್ದರಿಂದ ಅರ್ಜುನ ಸುತ್ತಮುತ್ತಲಿದ್ದ ಮರಗಳನ್ನು ಬೀಳಿಸಿತು. ಅರ್ಜುನ ಆನೆ ನಡೆಯಲಾಗದ ಪರಿಸ್ಥಿತಿಯಲ್ಲಿತ್ತು. ಈ ವೇಳೆ, ಸೆರೆ ಹಿಡಿಯಬೇಕಿದ್ದ ಕಾಡಾನೆಯೇ ಅರ್ಜುನನ ಮೇಲೆ ದಾಳಿ ಮಾಡಿತು” ಎಂದು ಮಾವುತ ವಿಡಿಯೋದಲ್ಲಿ ಹೇಳಿದ್ದಾರೆ.
ವನ್ಯಜೀವಿ ಪ್ರಿಯರು ಹಾಗೂ ಹೋರಾಟಗಾರರು ಅರ್ಜುನ ಆನೆಯ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಒತ್ತಾಯಿಸಿದ್ದಾರೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಬೆಂಗಳೂರಿನ ಮಲ್ಲೇಶ್ವರದಲ್ಲಿ ಮಂಗಳವಾರ ಸಂಜೆ 4ಗಂಟೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. 'ಅಂಬಾರಿ ಆನೆ ಅರ್ಜುನ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು. ತಪ್ಪಿತಸ್ಥರಿಗೆ ಶಿಕ್ಷ ಆಗಬೇಕು' ಎಂದು ಆಗ್ರಹಿಸಿದ್ದಾರೆ.
ವನ್ಯ ಜೀವಿ ತಜ್ಞರು ಹೇಳುವಂತೆ, ವಯಸ್ಸಾದ ಕಾರಣಕ್ಕೆ ಅರ್ಜುನನಿಗೆ ಅಂಬಾರಿ ಹೋರುವುದನ್ನೇ ನಿಲ್ಲಿಸಲಾಗಿದೆ. 64 ವರ್ಷದ ಅರ್ಜುನನ್ನು ಕಾಡಿನ ಪುಂಡಾನೆ/ ಒಂಟಿ ಸಲಗಗಳ ಸೆರೆ ಕಾರ್ಯಾಚರಣೆಗೆ ಬಳಸಬಾರದಿತ್ತು. ಅರಣ್ಯ ಇಲಾಖೆ ಕಾರ್ಯಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ.
Hassan Elephant arjuna death, mahouts and villagers protest over cremation, police laticharge.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm