ಬ್ರೇಕಿಂಗ್ ನ್ಯೂಸ್
05-12-23 06:40 pm HK News Desk ಕರ್ನಾಟಕ
ಶಿವಮೊಗ್ಗ, ಡಿ.5: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ನಾಲ್ಕನೇ ಅಂತಸ್ತಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಶಿವಮೊಗ್ಗದ ಶರಾವತಿ ನಗರ ಬಡಾವಣೆಯ ಖಾಸಗಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಘಶ್ರೀ(18) ಮೃತಳು. ಬೆಳಗ್ಗೆ ಕಾಲೇಜಿನಲ್ಲಿ ಜೀವಶಾಸ್ತ್ರದ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ನಡೆಯುವ ಮಧ್ಯೆ ಶೌಚಾಲಯಕ್ಕೆಂದು ಹೊರ ಹೋದ ವಿದ್ಯಾರ್ಥಿನಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ
ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಕಾಲೇಜಿನ ಸಿಬ್ಬಂದಿಗಳು ಮೆಗ್ಗಾನ್ ಬೋಧನಾಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಆಕೆ ಮೃತಪಟ್ಟಿದ್ದಾಳೆ. ಕಾಲೇಜು ಸಿಬ್ಬಂದಿ ವಿದ್ಯಾರ್ಥಿನಿ ಮೃತಪಟ್ಟ ಬಗ್ಗೆ ತಡವಾಗಿ ವಿಷಯ ತಿಳಿಸಿದ್ದಕ್ಕೆ ಪೋಷಕರು ಕಾಲೇಜಿಗೆ ಆಗಮಿಸಿ ಆಕ್ರೋಶ ಹೊರ ಹಾಕಿದ್ದಾರೆ. ಪೋಷಕರು ಮತ್ತು ಸಂಬಂಧಿಕರು ಕಾಲೇಜಿನ ಬಳಿ ಬಂದಾಗ ಗೇಟು ತೆಗೆಯದೇ ಕಾಲೇಜಿನವರು ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಬಳಿಕ ಕಾಲೇಜಿನ ಒಳಗೆ ಬಂದ ವಿದ್ಯಾರ್ಥಿನಿಯ ಪೋಷಕರು ಮತ್ತು ಸಂಬಂಧಿಕರು ಆಡಳಿತ ಮಂಡಳಿಯ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶ ಮಾಡಿ ಪೋಷಕರ ಮನವೊಲಿಸಿ ಶಾಲೆಯಿಂದ ಹೊರಗೆ ಕರೆ ತಂದರು.
ಮೇಘಶ್ರೀ ಶಾಲಾ ಕಟ್ಟಡದಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಕಾಲೇಜಿನ ಮೂಲಗಳು ತಿಳಿಸಿವೆ. ಆದರೆ ಪೋಷಕರು ಕಾಲೇಜಿನ ಉಪನ್ಯಾಸಕರ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಮೃತ ವಿದ್ಯಾರ್ಥಿನಿಯ ತಂದೆ ಓಂಕಾರಪ್ಪ, ನನಗೆ ಫೋನ್ ಮಾಡಿ ನಿಮ್ಮ ಮಗಳಿಗೆ ಸಣ್ಣ ಗಾಯವಾಗಿದೆ. ಆಸ್ಪತ್ರೆಗೆ ಬನ್ನಿ ಎಂದು ಹೇಳಿದ್ದರು. ನಂತರ ಫೋನ್ ಮಾಡಿದಾಗ ಯಾರು ಸಹ ಫೋನ್ ರಿಸೀವ್ ಮಾಡಲಿಲ್ಲ. ಕಾಲೇಜಿನಲ್ಲಿ ಮಕ್ಕಳಿಗೆ ಯಾವಾಗಲೂ ಕಿರುಕುಳ ನೀಡುತ್ತಿದ್ದರು. ಒಂದು ನಿಮಿಷ ತಡವಾಗಿ ಬಂದರೆ ಗೇಟ್ ಹೊರಗೆ ಬಿಸಿಲಿನಲ್ಲಿ ನಿಲ್ಲಿಸುತ್ತಿದ್ದರು. ಹಬ್ಬ ಅಂತ ಹೋಗಿ ಬಂದ್ರೆ, ಬೈಯುತ್ತಿದ್ದರು. ಹೀಗೆ ಕಾಲೇಜಿನವರ ಟಾರ್ಚರ್ನಿಂದಲೇ ನಮ್ಮ ಮಗಳು ಇಂದು ಸಾವನ್ನಪ್ಪಿದ್ದಾಳೆ. ಈ ಕುರಿತು ಸೂಕ್ತ ತನಿಖೆ ಆಗಬೇಕೆಂದು ಒತ್ತಾಯಿಸಿದರು.
A student of a private college in Shivamogga died after falling from the fourth floor of the college. The deceased has been identified as Meghashree (5), a 18nd PUC student of a private PU college in Sharavathi Nagar layout of Shivamogga.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
26-08-25 07:39 pm
HK News Desk
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm