ಬ್ರೇಕಿಂಗ್ ನ್ಯೂಸ್
05-12-23 06:40 pm HK News Desk ಕರ್ನಾಟಕ
ಶಿವಮೊಗ್ಗ, ಡಿ.5: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ನಾಲ್ಕನೇ ಅಂತಸ್ತಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಶಿವಮೊಗ್ಗದ ಶರಾವತಿ ನಗರ ಬಡಾವಣೆಯ ಖಾಸಗಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಘಶ್ರೀ(18) ಮೃತಳು. ಬೆಳಗ್ಗೆ ಕಾಲೇಜಿನಲ್ಲಿ ಜೀವಶಾಸ್ತ್ರದ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ನಡೆಯುವ ಮಧ್ಯೆ ಶೌಚಾಲಯಕ್ಕೆಂದು ಹೊರ ಹೋದ ವಿದ್ಯಾರ್ಥಿನಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ
ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಕಾಲೇಜಿನ ಸಿಬ್ಬಂದಿಗಳು ಮೆಗ್ಗಾನ್ ಬೋಧನಾಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಆಕೆ ಮೃತಪಟ್ಟಿದ್ದಾಳೆ. ಕಾಲೇಜು ಸಿಬ್ಬಂದಿ ವಿದ್ಯಾರ್ಥಿನಿ ಮೃತಪಟ್ಟ ಬಗ್ಗೆ ತಡವಾಗಿ ವಿಷಯ ತಿಳಿಸಿದ್ದಕ್ಕೆ ಪೋಷಕರು ಕಾಲೇಜಿಗೆ ಆಗಮಿಸಿ ಆಕ್ರೋಶ ಹೊರ ಹಾಕಿದ್ದಾರೆ. ಪೋಷಕರು ಮತ್ತು ಸಂಬಂಧಿಕರು ಕಾಲೇಜಿನ ಬಳಿ ಬಂದಾಗ ಗೇಟು ತೆಗೆಯದೇ ಕಾಲೇಜಿನವರು ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಬಳಿಕ ಕಾಲೇಜಿನ ಒಳಗೆ ಬಂದ ವಿದ್ಯಾರ್ಥಿನಿಯ ಪೋಷಕರು ಮತ್ತು ಸಂಬಂಧಿಕರು ಆಡಳಿತ ಮಂಡಳಿಯ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶ ಮಾಡಿ ಪೋಷಕರ ಮನವೊಲಿಸಿ ಶಾಲೆಯಿಂದ ಹೊರಗೆ ಕರೆ ತಂದರು.
ಮೇಘಶ್ರೀ ಶಾಲಾ ಕಟ್ಟಡದಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಕಾಲೇಜಿನ ಮೂಲಗಳು ತಿಳಿಸಿವೆ. ಆದರೆ ಪೋಷಕರು ಕಾಲೇಜಿನ ಉಪನ್ಯಾಸಕರ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಮೃತ ವಿದ್ಯಾರ್ಥಿನಿಯ ತಂದೆ ಓಂಕಾರಪ್ಪ, ನನಗೆ ಫೋನ್ ಮಾಡಿ ನಿಮ್ಮ ಮಗಳಿಗೆ ಸಣ್ಣ ಗಾಯವಾಗಿದೆ. ಆಸ್ಪತ್ರೆಗೆ ಬನ್ನಿ ಎಂದು ಹೇಳಿದ್ದರು. ನಂತರ ಫೋನ್ ಮಾಡಿದಾಗ ಯಾರು ಸಹ ಫೋನ್ ರಿಸೀವ್ ಮಾಡಲಿಲ್ಲ. ಕಾಲೇಜಿನಲ್ಲಿ ಮಕ್ಕಳಿಗೆ ಯಾವಾಗಲೂ ಕಿರುಕುಳ ನೀಡುತ್ತಿದ್ದರು. ಒಂದು ನಿಮಿಷ ತಡವಾಗಿ ಬಂದರೆ ಗೇಟ್ ಹೊರಗೆ ಬಿಸಿಲಿನಲ್ಲಿ ನಿಲ್ಲಿಸುತ್ತಿದ್ದರು. ಹಬ್ಬ ಅಂತ ಹೋಗಿ ಬಂದ್ರೆ, ಬೈಯುತ್ತಿದ್ದರು. ಹೀಗೆ ಕಾಲೇಜಿನವರ ಟಾರ್ಚರ್ನಿಂದಲೇ ನಮ್ಮ ಮಗಳು ಇಂದು ಸಾವನ್ನಪ್ಪಿದ್ದಾಳೆ. ಈ ಕುರಿತು ಸೂಕ್ತ ತನಿಖೆ ಆಗಬೇಕೆಂದು ಒತ್ತಾಯಿಸಿದರು.
A student of a private college in Shivamogga died after falling from the fourth floor of the college. The deceased has been identified as Meghashree (5), a 18nd PUC student of a private PU college in Sharavathi Nagar layout of Shivamogga.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm