ಬ್ರೇಕಿಂಗ್ ನ್ಯೂಸ್
05-12-23 06:40 pm HK News Desk ಕರ್ನಾಟಕ
ಶಿವಮೊಗ್ಗ, ಡಿ.5: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ನಾಲ್ಕನೇ ಅಂತಸ್ತಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಶಿವಮೊಗ್ಗದ ಶರಾವತಿ ನಗರ ಬಡಾವಣೆಯ ಖಾಸಗಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಘಶ್ರೀ(18) ಮೃತಳು. ಬೆಳಗ್ಗೆ ಕಾಲೇಜಿನಲ್ಲಿ ಜೀವಶಾಸ್ತ್ರದ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ನಡೆಯುವ ಮಧ್ಯೆ ಶೌಚಾಲಯಕ್ಕೆಂದು ಹೊರ ಹೋದ ವಿದ್ಯಾರ್ಥಿನಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ
ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಕಾಲೇಜಿನ ಸಿಬ್ಬಂದಿಗಳು ಮೆಗ್ಗಾನ್ ಬೋಧನಾಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಆಕೆ ಮೃತಪಟ್ಟಿದ್ದಾಳೆ. ಕಾಲೇಜು ಸಿಬ್ಬಂದಿ ವಿದ್ಯಾರ್ಥಿನಿ ಮೃತಪಟ್ಟ ಬಗ್ಗೆ ತಡವಾಗಿ ವಿಷಯ ತಿಳಿಸಿದ್ದಕ್ಕೆ ಪೋಷಕರು ಕಾಲೇಜಿಗೆ ಆಗಮಿಸಿ ಆಕ್ರೋಶ ಹೊರ ಹಾಕಿದ್ದಾರೆ. ಪೋಷಕರು ಮತ್ತು ಸಂಬಂಧಿಕರು ಕಾಲೇಜಿನ ಬಳಿ ಬಂದಾಗ ಗೇಟು ತೆಗೆಯದೇ ಕಾಲೇಜಿನವರು ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಬಳಿಕ ಕಾಲೇಜಿನ ಒಳಗೆ ಬಂದ ವಿದ್ಯಾರ್ಥಿನಿಯ ಪೋಷಕರು ಮತ್ತು ಸಂಬಂಧಿಕರು ಆಡಳಿತ ಮಂಡಳಿಯ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶ ಮಾಡಿ ಪೋಷಕರ ಮನವೊಲಿಸಿ ಶಾಲೆಯಿಂದ ಹೊರಗೆ ಕರೆ ತಂದರು.
ಮೇಘಶ್ರೀ ಶಾಲಾ ಕಟ್ಟಡದಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಕಾಲೇಜಿನ ಮೂಲಗಳು ತಿಳಿಸಿವೆ. ಆದರೆ ಪೋಷಕರು ಕಾಲೇಜಿನ ಉಪನ್ಯಾಸಕರ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಮೃತ ವಿದ್ಯಾರ್ಥಿನಿಯ ತಂದೆ ಓಂಕಾರಪ್ಪ, ನನಗೆ ಫೋನ್ ಮಾಡಿ ನಿಮ್ಮ ಮಗಳಿಗೆ ಸಣ್ಣ ಗಾಯವಾಗಿದೆ. ಆಸ್ಪತ್ರೆಗೆ ಬನ್ನಿ ಎಂದು ಹೇಳಿದ್ದರು. ನಂತರ ಫೋನ್ ಮಾಡಿದಾಗ ಯಾರು ಸಹ ಫೋನ್ ರಿಸೀವ್ ಮಾಡಲಿಲ್ಲ. ಕಾಲೇಜಿನಲ್ಲಿ ಮಕ್ಕಳಿಗೆ ಯಾವಾಗಲೂ ಕಿರುಕುಳ ನೀಡುತ್ತಿದ್ದರು. ಒಂದು ನಿಮಿಷ ತಡವಾಗಿ ಬಂದರೆ ಗೇಟ್ ಹೊರಗೆ ಬಿಸಿಲಿನಲ್ಲಿ ನಿಲ್ಲಿಸುತ್ತಿದ್ದರು. ಹಬ್ಬ ಅಂತ ಹೋಗಿ ಬಂದ್ರೆ, ಬೈಯುತ್ತಿದ್ದರು. ಹೀಗೆ ಕಾಲೇಜಿನವರ ಟಾರ್ಚರ್ನಿಂದಲೇ ನಮ್ಮ ಮಗಳು ಇಂದು ಸಾವನ್ನಪ್ಪಿದ್ದಾಳೆ. ಈ ಕುರಿತು ಸೂಕ್ತ ತನಿಖೆ ಆಗಬೇಕೆಂದು ಒತ್ತಾಯಿಸಿದರು.
A student of a private college in Shivamogga died after falling from the fourth floor of the college. The deceased has been identified as Meghashree (5), a 18nd PUC student of a private PU college in Sharavathi Nagar layout of Shivamogga.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm