ಬ್ರೇಕಿಂಗ್ ನ್ಯೂಸ್
17-11-20 09:49 am Bangalore Correspondent ಕರ್ನಾಟಕ
ಬೆಂಗಳೂರು, .ನ.17: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ದಿಢೀರ್ ಹೊತ್ತಿಕೊಂಡಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಿಬಿಎಂಪಿ ಮಾಜಿ ಮೇಯರ್, ಕಾಂಗ್ರೆಸ್ ಮುಖಂಡ ಸಂಪತ್ ರಾಜ್ ನನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ಸೆರೆಗಾಗಿ ಸಿಸಿಬಿಯಿಂದ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಮಂಗಳವಾರ ಸಂಪತ್ ರಾಜ್ ಆಪ್ತ ರಿಯಾಜುದ್ದೀನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಮಾಹಿತಿ ಕಲೆಹಾಕಿದ್ದರು. ಕಳೆದ 24 ದಿನಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವೆಡೆ ಸುತ್ತಾಡಿದ್ದ ಸಂಪತ್ ರಾಜ್ ಸ್ನೇಹಿತನ ಮನೆಗೆಂದು ಬಂದಿರುವುದು ಗೊತ್ತಾಗಿದ್ದು ಪೊಲೀಸರು ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿ ಬಲೆಗೆ ಕೆಡವಿದ್ದಾರೆ.

ವಿವಾದಿತ ಪೋಸ್ಟ್ ಒಂದಕ್ಕೆ ಸಂಬಂಧಿಸಿ ಆಗಸ್ಟ್ 11 ರಂದು ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಭೆ ಸೃಷ್ಟಿಯಾಗಿತ್ತು. ಏಕಾಏಕಿ ಬಂದಿದ್ದ ಸಾವುರಾರು ಮಂದಿ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಅವರ ಸಹೋದರಿಯ ಮನೆಗೆ ದಾಳಿ ನಡೆಸಿದ್ದರು. ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಪೊಲೀಸ್ ಠಾಣೆ ಮೇಲೂ ದಾಳಿ ನಡೆಸಿ ಹಾನಿಗೊಳಿಸಿದ್ದರು. ಅಲ್ಲದೆ, ಈ ವೇಳೆ ಸಾಕಷ್ಟು ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು. ಸಾರ್ವಜನಿಕ ಆಸ್ತಿಪಾಸ್ತಿಗಳಿಗೂ ಹಾನಿಯುಂಟಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಈವರೆಗೂ 421 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮೇಲಿನ ದ್ವೇಷದಿಂದ ಮಾಜಿ ಮೇಯರ್, ಕಾಂಗ್ರೆಸ್ ಮುಖಂಡ ಸಂಪತ್ ರಾಜ್ ಗಲಭೆಗೆ ಪ್ರೇರಣೆ ನೀಡಿದ್ದ ಎಂದು ಪೊಲೀಸರು ಪತ್ತೆಮಾಡಿದ್ದು ಆರೋಪಿಯೆಂದು ಗುರುತಿಸಿ ಬಂಧಿಸಿದ್ದರು. ಆದರೆ, ಸಂಪತ್ ರಾಜ್ ಬಂಧನಕ್ಕೊಳಗಾದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದಲ್ಲದೆ ಅಲ್ಲಿಂದ ಪರಾರಿಯಾಗಿದ್ದ. ಈ ವಿಚಾರ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಲ್ಲಿ ಆರೋಪ - ಪ್ರತ್ಯಾರೋಪಕ್ಕೆ ಕಾರಣವಾಗಿತ್ತು.
Bengaluru Central Crime Branch police on Tuesday arrested former mayor and Congress leader R. Sampath Raj, who was wanted in Bengaluru riots case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm