ಬ್ರೇಕಿಂಗ್ ನ್ಯೂಸ್
17-11-20 09:49 am Bangalore Correspondent ಕರ್ನಾಟಕ
ಬೆಂಗಳೂರು, .ನ.17: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ದಿಢೀರ್ ಹೊತ್ತಿಕೊಂಡಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಿಬಿಎಂಪಿ ಮಾಜಿ ಮೇಯರ್, ಕಾಂಗ್ರೆಸ್ ಮುಖಂಡ ಸಂಪತ್ ರಾಜ್ ನನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ಸೆರೆಗಾಗಿ ಸಿಸಿಬಿಯಿಂದ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಮಂಗಳವಾರ ಸಂಪತ್ ರಾಜ್ ಆಪ್ತ ರಿಯಾಜುದ್ದೀನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಮಾಹಿತಿ ಕಲೆಹಾಕಿದ್ದರು. ಕಳೆದ 24 ದಿನಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವೆಡೆ ಸುತ್ತಾಡಿದ್ದ ಸಂಪತ್ ರಾಜ್ ಸ್ನೇಹಿತನ ಮನೆಗೆಂದು ಬಂದಿರುವುದು ಗೊತ್ತಾಗಿದ್ದು ಪೊಲೀಸರು ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿ ಬಲೆಗೆ ಕೆಡವಿದ್ದಾರೆ.

ವಿವಾದಿತ ಪೋಸ್ಟ್ ಒಂದಕ್ಕೆ ಸಂಬಂಧಿಸಿ ಆಗಸ್ಟ್ 11 ರಂದು ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಭೆ ಸೃಷ್ಟಿಯಾಗಿತ್ತು. ಏಕಾಏಕಿ ಬಂದಿದ್ದ ಸಾವುರಾರು ಮಂದಿ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಅವರ ಸಹೋದರಿಯ ಮನೆಗೆ ದಾಳಿ ನಡೆಸಿದ್ದರು. ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಪೊಲೀಸ್ ಠಾಣೆ ಮೇಲೂ ದಾಳಿ ನಡೆಸಿ ಹಾನಿಗೊಳಿಸಿದ್ದರು. ಅಲ್ಲದೆ, ಈ ವೇಳೆ ಸಾಕಷ್ಟು ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು. ಸಾರ್ವಜನಿಕ ಆಸ್ತಿಪಾಸ್ತಿಗಳಿಗೂ ಹಾನಿಯುಂಟಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಈವರೆಗೂ 421 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮೇಲಿನ ದ್ವೇಷದಿಂದ ಮಾಜಿ ಮೇಯರ್, ಕಾಂಗ್ರೆಸ್ ಮುಖಂಡ ಸಂಪತ್ ರಾಜ್ ಗಲಭೆಗೆ ಪ್ರೇರಣೆ ನೀಡಿದ್ದ ಎಂದು ಪೊಲೀಸರು ಪತ್ತೆಮಾಡಿದ್ದು ಆರೋಪಿಯೆಂದು ಗುರುತಿಸಿ ಬಂಧಿಸಿದ್ದರು. ಆದರೆ, ಸಂಪತ್ ರಾಜ್ ಬಂಧನಕ್ಕೊಳಗಾದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದಲ್ಲದೆ ಅಲ್ಲಿಂದ ಪರಾರಿಯಾಗಿದ್ದ. ಈ ವಿಚಾರ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಲ್ಲಿ ಆರೋಪ - ಪ್ರತ್ಯಾರೋಪಕ್ಕೆ ಕಾರಣವಾಗಿತ್ತು.
Bengaluru Central Crime Branch police on Tuesday arrested former mayor and Congress leader R. Sampath Raj, who was wanted in Bengaluru riots case.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm