ಬ್ರೇಕಿಂಗ್ ನ್ಯೂಸ್
05-12-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.5 : ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರಾಗಿದ್ದ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ಮಂಗಳವಾರ ಸಂಜೆ 50 ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಗಿದೆ. ಕ್ಯಾಪ್ಟನ್ ಪ್ರಾಂಜಲ್ ಮೃತದೇಹ ಬೆಂಗಳೂರಿಗೆ ತಂದಿದ್ದಾಗ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ, ನಂತರ ಆ ವಿಚಾರವನ್ನು ಮರೆತು ಬಿಟ್ಟಿದ್ದರು.
ಪರಿಹಾರ ನೀಡುವ ವಿಚಾರದಲ್ಲಿ ಮಾಧ್ಯಮ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಸಿದ್ದರಾಮಯ್ಯ ಆರಂಭದಲ್ಲಿ ಪ್ರಾಂಜಲ್ ಯಾರೆಂದೇ ಗೊತ್ತಿಲ್ಲವೆಂದು ಉಡಾಫೆ ರೀತಿಯಲ್ಲಿ ಉತ್ತರಿಸಿದ್ದರು. ಇದೇ ವಿಚಾರವನ್ನು ಪ್ರಸ್ತಾಪಿಸಿದ್ದ ಪ್ರತಿಪಕ್ಷಗಳು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದವು. ಸರ್ಕಾರದ ನಡೆಯ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೀವ್ರ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಟ್ವೀಟ್ ಮಾಡಿ, ಪರಿಹಾರ ಧನವನ್ನು ಮಂಜೂರು ಮಾಡುವ ಬಗ್ಗೆ ಆದೇಶ ಹೊರಡಿಸಿದ್ದರು. ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಜಿಲ್ಲಾಧಿಕಾರಿ ದಯಾನಂದ್, ಪ್ರಾಂಜಲ್ ಅವರ ಕುಟುಂಬಕ್ಕೆ ಪತ್ನಿ ಮತ್ತು ತಾಯಿಗೆ ಸಮಾನ ಮೊತ್ತದ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸೈನಿಕ ಕಲ್ಯಾಣ ನಿರ್ದೇಶಕರಾದ ಶಶಿಧರ್ ಉಪಸ್ಥಿತರಿದ್ದರು. 25 ಲಕ್ಷ ರೂ. ಮೊತ್ತದ ಎರಡು ಚೆಕ್ಗಳನ್ನು ಹಸ್ತಾಂತರಿಸಲಾಗಿದೆ.
The state government on Tuesday handed over cheque of Rs 50 lakh in compensation to the family of Captain M V Pranjal, who was recently killed in an encounter with terrorists in Jammu-Kashmir's Rajouri.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm