ಬ್ರೇಕಿಂಗ್ ನ್ಯೂಸ್
07-12-23 10:07 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 07: ಪ್ರೀತಿಸಿದ ಹುಡುಗಿ ಏಕಾಏಕಿ ಪ್ರೀತಿಯನ್ನು ನಿರಾಕರಿಸಿ ಬಿಟ್ಟು ಹೋಗಿದ್ದಕ್ಕೆ ಮನನೊಂದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಈ ಘಟನೆ ನಡೆದಿದೆ.
ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ರಾಕೇಶ್ ಮೃತ ದುರ್ದೈವಿ. ರಾಕೇಶ್ ಐದಾರು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇಬ್ಬರು ಪಾರ್ಕ್, ಸಿನಿಮಾ ಎಂದು ಊರು ಊರು ತಿರುಗಿದ್ದರು. ಆದರೆ ಇತ್ತೀಚೆಗೆ ರಾಕೇಶ್ನನ್ನು ಯುವತಿ ಅವಾಯ್ಡ್ ಮಾಡಲು ಶುರು ಮಾಡಿದ್ದಳು.
ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದವಳು ಏಕಾಏಕಿ ದೂರಾಗಿದ್ದಳು. ಮಸೇಜ್, ಫೋನ್ ಕಾಲ್ಗೂ ರೆಸ್ಪಾನ್ಸ್ ಮಾಡುತ್ತಿರಲಿಲ್ಲ. ಈ ನಡುವೆ ಬೇರೆ ಯುವಕನ ಜತೆ ಮದುವೆಗೆ ಸಿದ್ಧತೆಯನ್ನು ನಡೆಸಿದ್ದಳು. ಈ ವಿಷಯ ತಿಳಿದು ನಿನ್ನೆ ಬುಧವಾರ ರಾಕೇಶ್ ನೇರ ಯುವತಿ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ. ಈ ವೇಳೆ ರಾಕೇಶ್ ಹಾಗೂ ಯುವತಿ ನಡುವೆ ಗಲಾಟೆ ಆಗಿತ್ತು.
ಪ್ರೀತಿಸಿದವಳು ಮೋಸ ಮಾಡಿಬಿಟ್ಟಳೆಂದು ಮನನೊಂದಿದ್ದ ರಾಕೇಶ್, ಮನೆಗೆ ಬಂದವನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ಗಾಯಾಳು ರಾಕೇಶ್ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಬೆಂಕಿ ತೀವ್ರತೆಗೆ ದೇಹದ ಬಹುತೇಕ ಭಾಗ ಸುಟ್ಟು ಕರಕಲಾಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ಬುಧವಾರ ರಾತ್ರಿಯೇ ಮೃತಪಟ್ಟಿದ್ದಾನೆ. ರಾಕೇಶ್ ಕುಟುಂಬಸ್ಥರು ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
Bangalore youth sets himself fire after lover girl ends relationship. A young man committed suicide by setting himself on fire in Bengaluru after the woman he loved decided to marry someone else, police said. The deceased man Rakesh was a resident of Kottigepalya in Kengeri locality.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am