ಬ್ರೇಕಿಂಗ್ ನ್ಯೂಸ್
08-12-23 11:28 am HK News Desk ಕರ್ನಾಟಕ
ಚಿತ್ರದುರ್ಗ, ಡಿ 08: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮದುವೆ ಕ್ಯಾನ್ಸಲ್ ಆಗಿದೆ. ವರ ತಾಳಿಕಟ್ಟುವಾಗ ವಧು ತಾಳಿಗೆ ಕೈ ಅಡ್ಡ ಹಿಡಿದು ತಡೆದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಚಿಕ್ಕಬ್ಯಾಲದಕೆರೆ ಗ್ರಾಮದ ಮಂಜುನಾಥ್ ಹಾಗೂ ಚಳ್ಳಕೆರೆ ತಾಲೂಕಿನ ತಿಪ್ಪರೆಡ್ಡಿಹಳ್ಳಿಯ ಐಶ್ವರ್ಯಾ ಜೊತೆ ವಿವಾಹ ಫಿಕ್ಸ್ ಆಗಿತ್ತು. ಆದರೆ ಗುರುವಾರ ಬೆಳಗ್ಗೆ ಗ್ರಾಮದ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಯ ಮುಹೂರ್ತ ನಡೆಯುವ ವೇಳೆ ವರನಿಗೆ ವಧು ಶಾಕ್ ನೀಡಿದ್ದಾಳೆ. ವರ ತಾಳಿಕಟ್ಟುವ ವೇಳೆ ಮಂಜುನಾಥ್ ನನಗೆ ಇಷ್ಟ ಇಲ್ಲವೆಂದು ಹೇಳಿದ್ದಾಳೆ. ಯುವತಿ ನಡೆಗೆ ಯುವಕನ ಸಂಬಂಧಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಆಗ ಯುವತಿ ಮನೆಯವರು ಹಾಗೂ ಯುವಕನ ಕುಟುಂಬಸ್ಥರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಎರಡು ಕಡೆಯ ಸಂಬಂಧಿಗಳು ವಧುವಿನ ಮನವೊಲಿಸಲು ಯತ್ನಿಸಿದ್ರು ಕೂಡ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮದುವೆ ಮುರಿದುಬಿದ್ದಿದೆ. ಮದುವೆಗೆ ಆಗಮಿಸಿದ ಜನರು, ಸಂಬಂಧಿಗಳು ವಧುಗೆ ಹಿಡಿಶಾಪ ಹಾಕಿದ್ದಾರೆ. ವರನ ಕನಸು ನುಚ್ಚು ನೂರು ಮಾಡಿದಳು. ಮೊದಲೇ ತಿಳಿಸಿದ್ರೆ ಸಮಸ್ಯೆ ಎದುರಾಗ್ತಿರಲಿಲ್ಲ ಅಂತ ಹಿಡಿಶಾಪ ಹಾಕಿದ್ದಾರೆ.
ಮದುವೆ ನಿರಾಕರಣೆಗೆ ಈವರೆಗೆ ಕಾರಣ ತಿಳಿದುಬಂದಿಲ್ಲ. ಆದರೆ ಕುಟುಂಬಸ್ಥರ ಒತ್ತಾಯದ ಮೇರೆಗೆ ಮದುವೆಗೆ ಯುವತಿ ಸಮ್ಮತಿಸಿದ್ದು, ಆಕೆ ತಾಳಿಕಟ್ಟುವ ವೇಳೆ ಧೈರ್ಯ ಮಾಡಿ ವಿವಾಹ ನಿರಾಕರಿಸಿದ್ದಾಳೆಂಬ ಮಾತುಗಳು ಕೇಳಿಬಂದಿವೆ. ಸದ್ಯ ಪ್ರಕರಣ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Bride rejects bridegroom on the day of wedding on stage at Chitradurga, video goes viral.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm