ಬ್ರೇಕಿಂಗ್ ನ್ಯೂಸ್
08-12-23 04:51 pm HK News Desk ಕರ್ನಾಟಕ
Photo credits : Public tv
ಚಿತ್ರದುರ್ಗ, ಡಿ.08: ಹೆತ್ತ ತಾಯಿಯೇ ಇಬ್ಬರು ಮಕ್ಕಳನ್ನು ಕೊಂದು, ಬಳಿಕ ತಾನು ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಯಾದಲಘಟ್ಟ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಯಾದಲಗಟ್ಟ ಗ್ರಾಮದ ಲತಾ ಹಾಗೂ ಪತಿ ತಿಪ್ಪೇಸ್ವಾಮಿಗೆ ಇಬ್ಬರು ಮಕ್ಕಳಿದ್ದು, ಬೆಳಗ್ಗೆ ಎಂದಿನಂತೆ ತಿಪ್ಪೇಸ್ವಾಮಿ ಜಮೀನಿಗೆ ತೆರಳಿದ್ದರು. ಹೀಗಾಗಿ ಎಂದಿನಂತೆ ಪತ್ನಿ ಊಟ ತೆಗೆದುಕೊಂಡು ಬರುವಳೆಂಬ ನಿರೀಕ್ಷೆಯಲ್ಲಿದ್ದ ಪತಿಗೆ ಮನೆಯಲ್ಲಿ ನಡೆದಿರುವ ಘಟನೆ ಕೇಳಿ ಶಾಕ್ ಆಗಿದೆ. ಗ್ರಾಮಸ್ಥರಿಂದ ವಿಷಯ ತಿಳಿದು ಮನೆಗೆ ಧಾವಿಸಿ, ಗಮನಿಸಿದಾಗ ಪತ್ನಿ ಲತಾ ಹಾಗೂ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.
ತಾಯಿ ಲತಾ (25) ಮಗಳು ಪ್ರಣೀತ(5), ಪುತ್ರ ಜ್ಞಾನೇಶ್ವರ ಮೃತರೆಂದು ಗುರುತಿಸಲಾಗಿದೆ. ಲತಾ ಮೊದಲಿಗೆ ತನ್ನ ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಹತ್ಯೆಗೈದಿದ್ದು ಬಳಿಕ ತಾನು ಸಹ ನೇಣಿಗೆ ಶರಣಾಗಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಆದರೆ ಈವರೆಗೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟಂಬಿಕ ಕಲಹದ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಲತಾಳ ಪತಿ ತಿಪ್ಪೇಸ್ವಾಮಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಸ್ಥಳದಲ್ಲಿ ಮೃತರ ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.
Mother kills her two children and commits suicide at Chitradruga.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 02:44 pm
HK News Staffer
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm