ಬ್ರೇಕಿಂಗ್ ನ್ಯೂಸ್
08-12-23 04:51 pm HK News Desk ಕರ್ನಾಟಕ
Photo credits : Public tv
ಚಿತ್ರದುರ್ಗ, ಡಿ.08: ಹೆತ್ತ ತಾಯಿಯೇ ಇಬ್ಬರು ಮಕ್ಕಳನ್ನು ಕೊಂದು, ಬಳಿಕ ತಾನು ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಯಾದಲಘಟ್ಟ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಯಾದಲಗಟ್ಟ ಗ್ರಾಮದ ಲತಾ ಹಾಗೂ ಪತಿ ತಿಪ್ಪೇಸ್ವಾಮಿಗೆ ಇಬ್ಬರು ಮಕ್ಕಳಿದ್ದು, ಬೆಳಗ್ಗೆ ಎಂದಿನಂತೆ ತಿಪ್ಪೇಸ್ವಾಮಿ ಜಮೀನಿಗೆ ತೆರಳಿದ್ದರು. ಹೀಗಾಗಿ ಎಂದಿನಂತೆ ಪತ್ನಿ ಊಟ ತೆಗೆದುಕೊಂಡು ಬರುವಳೆಂಬ ನಿರೀಕ್ಷೆಯಲ್ಲಿದ್ದ ಪತಿಗೆ ಮನೆಯಲ್ಲಿ ನಡೆದಿರುವ ಘಟನೆ ಕೇಳಿ ಶಾಕ್ ಆಗಿದೆ. ಗ್ರಾಮಸ್ಥರಿಂದ ವಿಷಯ ತಿಳಿದು ಮನೆಗೆ ಧಾವಿಸಿ, ಗಮನಿಸಿದಾಗ ಪತ್ನಿ ಲತಾ ಹಾಗೂ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.
ತಾಯಿ ಲತಾ (25) ಮಗಳು ಪ್ರಣೀತ(5), ಪುತ್ರ ಜ್ಞಾನೇಶ್ವರ ಮೃತರೆಂದು ಗುರುತಿಸಲಾಗಿದೆ. ಲತಾ ಮೊದಲಿಗೆ ತನ್ನ ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಹತ್ಯೆಗೈದಿದ್ದು ಬಳಿಕ ತಾನು ಸಹ ನೇಣಿಗೆ ಶರಣಾಗಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಆದರೆ ಈವರೆಗೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟಂಬಿಕ ಕಲಹದ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಲತಾಳ ಪತಿ ತಿಪ್ಪೇಸ್ವಾಮಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಸ್ಥಳದಲ್ಲಿ ಮೃತರ ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.
Mother kills her two children and commits suicide at Chitradruga.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm