ಬ್ರೇಕಿಂಗ್ ನ್ಯೂಸ್
11-12-23 01:00 pm HK News Desk ಕರ್ನಾಟಕ
ಬೆಳಗಾವಿ, ಡಿ 11: ತಾಲೂಕಿನ ವಂಚಮೂರಿ ಗ್ರಾಮದ ಯುವಕ-ಯುವತಿ ಪ್ರೀತಿಸಿ ಓಡಿ ಹೋಗಿದ್ದಕ್ಕೆ ರೊಚ್ಚಿಗೆದ್ದ ಯುವತಿ ಕಡೆಯವರು, ಯುವಕನ ತಾಯಿಯನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ವಂಟಮೂರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇಡೀ ಸರ್ಕಾರವೇ ಬೆಳಗಾವಿಯಲ್ಲಿ ಇರುವ ಸಂದರ್ಭದಲ್ಲಿ ಮಹಿಳೆ ಮೇಲೆ ಈ ರೀತಿಯಾಗಿ ಅಮಾನುಷ ಹಲ್ಲೆ ಆಗಿರುವುದು ಎಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
ಯುವತಿಯ ನಿಶ್ಚಿತಾರ್ಥ ಸೋಮವಾರ ಡಿ. 11ರಂದು ನಿಗದಿ ಆಗಿತ್ತು. ಈಕೆಯನ್ನು ಇದೇ ಗ್ರಾಮದ ಯುವಕ ಪ್ರೀತಿಸುತ್ತಿದ್ದನು. ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸೋಮವಾರ ಬೆಳಗಿನ ಜಾವ ಯುವಕ ತನ್ನ ಪ್ರೇಯಸಿಯನ್ನು ಓಡಿಸಿಕೊಂಡು ಹೋಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಯುವತಿ ಕುಟುಂಬಸ್ಥರು ಯುವಕನ ತಾಯಿ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ನಂತರ ಮೆರವಣಿಗೆ ನಡೆಸಿ ಅಲ್ಲಿಯೇ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ಮನೆಯನ್ನೂ ಸಂಪೂರ್ಣವಾಗಿ ಧ್ವಂಸಗೊಳಿಸಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಹಾನಿ ಮಾಡಿದ್ದಾರೆ. ಮನೆ ಬಾಗಿಲು, ಕಿಟಕಿ ಮುರಿದಿದ್ದಾರೆ ಎಂದಿ ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಲ್ಲೆ ನಡೆಸಿದ ಏಳು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Enraged over the elopement of a man and his wife from Vanchamuri village in Belagavi taluk, the girl's family allegedly stripped her naked and tied her to a pole and brutally assaulted her in the wee hours of Monday( December 11).
24-12-25 04:07 pm
Bangalore Correspondent
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
24-12-25 07:38 pm
HK News Desk
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
24-12-25 06:07 pm
Mangalore Correspondent
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
Sansad Khel Mahotsav Mangalore: ಮಂಗಳೂರಿನಲ್ಲಿ...
23-12-25 10:40 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm