ಬ್ರೇಕಿಂಗ್ ನ್ಯೂಸ್
12-12-23 04:57 pm HK News Desk ಕರ್ನಾಟಕ
ದಾವಣಗೆರೆ, ಡಿ.12: ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕಪ್ಪ ಹಾಗೂ ಅವರ ಮಗ ಸಚಿವ ಮಲ್ಲಿಕಾರ್ಜುನ್ ಅವರಿಗೆ ಸಂಕಷ್ಟ ಎದುರಾಗಿದೆ. ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಕುಕ್ಕರ್ ಹಂಚಿಕೆ ಮಾಡಿದ ಆರೋಪದಲ್ಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಚುನಾವಣೆ ಸಮಯದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಅವರ ಫೋಟೋಗಳನ್ನು ಅಂಟಿಸಿ ಕುಕ್ಕರ್, ಸೀರೆಯನ್ನು ಹಂಚಿಕೆ ಮಾಡಲಾಗಿತ್ತು. ಈ ಬಗ್ಗೆ ಇಬ್ಬರ ವಿರುದ್ಧವೂ ಅಂದಿನ ಎಸ್ಪಿ ಸಿ.ಬಿ.ರಿಷ್ಯಂತ್ ದೂರು ದಾಖಲಿಸಿದ್ದರು. ದೂರು ದಾಖಲಾಗಿ 6 ತಿಂಗಳು ಕಳೆದ್ರೂ ಪೊಲೀಸರು ನ್ಯಾಯಾಲಯಕ್ಕೆ ಚಾರ್ಟ್ ಸಲ್ಲಿಸಿಲ್ಲ. ಪೊಲೀಸರ ನಿರ್ಲಕ್ಷ್ಯ, ಚಾರ್ಜ್ ಶೀಟ್ ಹಾಕದ ಹಿನ್ನೆಲೆ ಪರಾಜಿತ ಅಭ್ಯರ್ಥಿ ಸುಬಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸುಭಾನ್ ಖಾನ್, ದಾವಣಗೆರೆ ದಕ್ಷಿಣ ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿಯಾಗಿದ್ದು ಅವರು ಸಲ್ಲಿಸಿದ ರಿಟ್ ಅರ್ಜಿ ಕೈಗೆತ್ತಿಕೊಂಡ ಹೈಕೋರ್ಟ್, ಮುಖ್ಯ ಚುನಾವಣಾಧಿಕಾರಿ, ದಾವಣಗೆರೆ ಜಿಲ್ಲಾಧಿಕಾರಿ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್ ಅವರಿಗೆ ನೊಟೀಸ್ ನೀಡಿದೆ.
ಚುನಾವಣೆ ವೇಳೆ ಶಾಮನೂರು, ಮಲ್ಲಿಕಾರ್ಜುನ್ ಭಾವಚಿತ್ರ ಇರುವ ಕುಕ್ಕರ್ ವಿತರಿಸಿದ ಬಗ್ಗೆ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾದರೆ ತಂದೆ, ಮಗನಿಗೆ ಸಂಕಷ್ಟ ಎದುರಾಗಲಿದ್ದು ಪ್ರಜಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆಯಿದೆ.
Senior Congress MLA Dr Shamanur Shivashankappa and his son Mallikarjun are in trouble. The high court has issued a notice for allegedly distributing cookers in violation of the model code of conduct during the elections.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm