ಬ್ರೇಕಿಂಗ್ ನ್ಯೂಸ್
13-12-23 11:09 am HK News Desk ಕರ್ನಾಟಕ
ಬೆಳಗಾವಿ, ಡಿ 13: ಬಳ್ಳಾರಿಯ ಅಭಿವೃದ್ಧಿ ಮತ್ತು ರೈತರನ್ನು ಬೆದರಿಸಿ ಜಮೀನು ಸ್ವಾಧೀನ ಪಡಿಸಿಕೊಂಡ ವಿಷಯಕ್ಕೆ ಸಂಬಂಧಿಸಿದಂತೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸದಸ್ಯ ಗಾಲಿ ಜನಾರ್ದನ ರೆಡ್ಡಿ ಹಾಗೂ ಕಾಂಗ್ರೆಸ್ನ ನಾರಾ ಭರತ್ ರೆಡ್ಡಿ ಪರಸ್ಪರ ಬೈದಾಡಿಕೊಂಡು, ಒಬ್ಬರ ಮೇಲೊಬ್ಬರು ಮುಗಿಬಿದ್ದ ಪ್ರಸಂಗ ನಡೆಯಿತು.
ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಜನಾರ್ದನ ರೆಡ್ಡಿ, 13 ವರ್ಷದ ಹಿಂದೆ ತಾನು ಮಂತ್ರಿಯಾಗಿದ್ದಾಗ ಹತ್ತಾರು ಯೋಜನೆ ರೂಪಿಸಿದ್ದೆ. ನಂತರ ಬಂದವರು ಅದನ್ನು ಮುಂದುವರಿಸಲಿಲ್ಲ ಎಂದು ಹೇಳಿದ್ದರು.

ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಭರತ್ ರೆಡ್ಡಿ, ಬ್ರಹ್ಮಿಣಿ ಸ್ಟೀಲ್ ಆರಂಭಿಸುವುದಾಗಿ 10–15 ಸಾವಿರ ಎಕರೆ ಭೂಮಿಯನ್ನು ಸರ್ಕಾರದಿಂದ ಪಡೆದಿದ್ದರು. ರೈತರು ಕೊಡಲು ಒಪ್ಪದಿದ್ದಾಗ ಗೂಂಡಾಗಿರಿ ನಡೆಸಿ ವಶಪಡಿಸಿಕೊಂಡಿದ್ದರು. ಬಳಿಕ, ಅದನ್ನು ರಿಯಲ್ ಎಸ್ಟೇಟ್ ಉದ್ದೇಶಕ್ಕೆ ಬಳಸಿಕೊಂಡಿದ್ದಲ್ಲದೇ ಬಳಿಕ ಬೇರೆ ಕಂಪನಿಗೆ ಮಾರಿದ್ದರು. ತಮ್ಮ ಜಮೀನಿಗೆ ಹೆಚ್ಚಿನ ಬೆಲೆ ಬರಲಿದೆ ಎಂಬ ಕಾರಣಕ್ಕೆ ನಿರ್ದಿಷ್ಟ ಪ್ರದೇಶದಲ್ಲಿಯೇ ವಿಮಾನ ನಿಲ್ದಾಣಕ್ಕೆ ಜಾಗ ಗೊತ್ತು ಮಾಡಿಸಿದ್ದರು. ಜಾಗ ಬಿಟ್ಟುಕೊಡದ ರೈತರ ಮೇಲೆ ಗೋಲಿಬಾರ್ ಮಾಡಿಸಿದ್ದರು. ಈಗ ಬಂದು ಅಭಿವೃದ್ಧಿಯ ಮಾತನಾಡುತ್ತಿದ್ದಾರೆ ಎಂದು ಜನಾರ್ದನ ರೆಡ್ಡಿಯವರ ಹೆಸರು ಹೇಳದೇ ಕುಟುಕಿದರು.
ಅದಕ್ಕೆ ಪ್ರತಿಕ್ರಿಯಿಸಿದ, ಜನಾರ್ದನ ರೆಡ್ಡಿ, ‘ಅವನಿಗೆ ತಲೆ ಇಲ್ಲ, ಏನೇನೋ ಮಾತನಾಡುತ್ತಾನೆ’ ಎಂದು ರೇಗಿದರು. ಈ ಮಾತಿಗೆ ಸಿಟ್ಟಾದ ಭರತ್ ರೆಡ್ಡಿ, ‘ನಿನಗೆ ತಲೆ ಇಲ್ಲ. ಕರ್ನಾಟಕದ ಗಡಿಭಾಗವನ್ನು ಆಂಧ್ರಕ್ಕೆ ಸೇರಿಸಿದ್ದು ನೀನೇ. ಕೂತ್ಕೊಳಯ್ಯ ತೆಪ್ಪಗೆ. ಕರ್ನಾಟಕದ ಜನರಿಗೆ ಏನೇನು ಮೋಸ ಮಾಡಿದ್ದೀಯ ಅದರ ದಾಖಲೆ ಬಿಚ್ಚಿಡುತ್ತೇನೆ. ತರ್ತೀನಿ ಬಾ’ ಎಂದು ಕೂಗಾಡಿದರು.
‘ಇವನ ಅಪ್ಪ ಇಪ್ಪತ್ತು ವರ್ಷ ಮನೆಯಿಂದ ಹೊರಗೇ ಬಾರದೇ ಕುಳಿತಿದ್ದ. ಅವನು ಕೂತಿದ್ದ ಎಂದು ಇವ ಈಗ ಬಂದಿದ್ದಾನೆ’ ಎಂದು ಜನಾರ್ದನ ರೆಡ್ಡಿ ಹೇಳಿದರು. ಸಚಿವ ಬಿ. ನಾಗೇಂದ್ರ ಸೇರಿದಂತೆ ಕಾಂಗ್ರೆಸ್ ಸದಸ್ಯರು ಭರತ್ ರೆಡ್ಡಿ ಬೆಂಬಲಕ್ಕೆ ನಿಂತರು. ತೀವ್ರ ವಾಕ್ಸಮರ ನಡೆಯಿತು.
ಮಧ್ಯ ಪ್ರವೇಶಿಸಿದ ಸಚಿವ ನಾಗೇಂದ್ರ, ‘ಸದನದ ಸದಸ್ಯರೊಬ್ಬರು ನಮಗೆ ನೋವುಂಟು ಮಾಡಿದ್ದಾರೆ. ಗಡಿಭಾಗದಲ್ಲಿ ಏನು ನಡೆದಿದೆ. ಜಮೀನು ಕಳೆದುಕೊಂಡ ರೈತರು ತಮ್ಮ ಕಷ್ಟ ತೋಡಿಕೊಂಡಿದ್ದಾರೆ. ಗಡಿಯಲ್ಲಿ ತಪ್ಪು ಮಾಡಿದವರನ್ನು ಶಿಕ್ಷಿಸದೇ ಬಿಡುವುದಿಲ್ಲ’ ಎಂದು ಹೇಳಿ ಚರ್ಚೆಯನ್ನು ಕೊನೆಗಾಣಿಸಿದರು.
ಅದಕ್ಕೂ ಮೊದಲು ಜನಾರ್ದನ ರೆಡ್ಡಿ ಮಾತನಾಡುವಾಗ, ತಾವು ಸಚಿವ ಸ್ಥಾನ ಕಳೆದುಕೊಂಡ ಬಳಿಕ ಬಳ್ಳಾರಿ ಜಿಲ್ಲೆಯ ಅಭಿವೃದ್ಧಿ ಸ್ಥಗಿತಗೊಂಡಿದೆ ಎಂದರು. ಇದನ್ನು ಕಾಂಗ್ರೆಸ್ನ ಈ. ತುಕಾರಾಂ ಆಕ್ಷೇಪಿಸಿದರು. ಇಬ್ಬರ ಮಧ್ಯೆ ವಾಕ್ಸಮರವೂ ನಡೆಯಿತು.
Mla Bharath Reddy vs Janardhana Reddy fight in assembly, Bharath talks in simgkuar, video goes viral.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm