ಬ್ರೇಕಿಂಗ್ ನ್ಯೂಸ್
14-12-23 07:45 pm HK News Desk ಕರ್ನಾಟಕ
ಬೆಳಗಾವಿ, ಡಿ 14: ಮದ್ಯಪಾನ ಪ್ರಿಯರಿಗೆ ಸರ್ಕಾರ ವಿಶೇಷ ಸವಲತ್ತುಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ಸದಸ್ಯರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಬೆಳಗಾವಿಯ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. `ನಿತ್ಯ ದುಡಿ, ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ’ ಘೋಷವಾಕ್ಯದೊಂದಿಗೆ ಮದ್ಯಪಾನ ಪ್ರಿಯರು ಪ್ರತಿಭಟನೆ ಮಾಡಿದ್ದಾರೆ. ಸರ್ಕಾರದ ಪರವಾಗಿ ಸಚಿವ ಸಂತೋಷ್ ಲಾಡ್ ಪ್ರತಿಭಟನಾಕಾರರ ಬೇಡಿಕೆಗಳನ್ನ ಆಲಿಸಿ, ಮನವಿ ಸ್ವೀಕರಿಸಿದ್ದಾರೆ. ಈ ವೇಳೆ ಬೇಡಿಕೆಗಳನ್ನ ಕೇಳಿ ಫುಲ್ ಸುಸ್ತಾಗಿದ್ದಾರೆ.

ಮದ್ಯಪಾನ ಪ್ರಿಯರ ಬೇಡಿಕೆಗಳು ಏನೇನು?
ಪ್ರತಿವರ್ಷ ಡಿಸೆಂಬರ್ 31ರ ದಿನವನ್ನು ಮದ್ಯಪಾನ ಪ್ರಿಯರ ದಿನವನ್ನಾಗಿ ಆಚರಣೆ ಮಾಡಬೇಕು. ಅಂದು ಎಲ್ಲಾ ರೀತಿಯ ಬಾರ್ , ರೆಸ್ಟೋರೆಂಟ್ನಲ್ಲಿ 50% ರಿಯಾಯಿತಿ ನೀಡಬೇಕು. ʻಕುಡುಕʼ ಎಂಬ ಪದಬಳಕೆ ನಿಷೇಧ ಮಾಡಬೇಕು, ಮದ್ಯಪಾನ ಪ್ರಿಯರ ಅಭಿವೃದ್ಧಿ ನಿಗಮ ಆರಂಭಿಸಿ 10% ಅನುದಾನ ನೀಡಬೇಕು. ಪ್ರತಿ ಬಾಟಲಿಗೆ ವಿಮೆ ನೀಡಬೇಕು, ಪ್ರತಿ ಬಾರ್ ಮುಂದೆ ಅಂಬುಲೆನ್ಸ್ ಸೇವೆ ನೀಡಬೇಕು. ಬಾರ್ ಪಕ್ಕದಲ್ಲಿ ಕುಡುಕರ ವಿಶ್ರಾಂತಿಗಾಗಿ ಭವನ ನಿರ್ಮಾಣ ಮಾಡಬೇಕು ಎಂದು ಸಂಘದ ಪ್ರಮುಖರು ಒತ್ತಾಯಿಸಿದ್ದಾರೆ.
ಮದ್ಯಪಾನ ಪ್ರಿಯರ ಆರೋಗ್ಯ ಹಾಳಾಗುತ್ತಿದೆ. ಲಿವರ್ ಸಮಸ್ಯೆಗೆ ತುತ್ತಾಗಿ ಆಸ್ಪತ್ರೆಗೆ ಬಿಲ್ ಪಾವತಿಸಲಾಗದೇ ಮರಣ ಹೊಂದುವ ಪರಿಸ್ಥಿತಿ ಬರುತ್ತಿದೆ. ಆದ್ದರಿಂದ ಆರೋಗ್ಯ ಸಮಸ್ಯೆಗಳಿಂದ ಆಗುವ ಖರ್ಚನ್ನು ಸರ್ಕಾರವೇ ಭರಿಸಬೇಕು. ಮದ್ಯಪಾನ ಪ್ರಿಯರಿಂದ ವಾರ್ಷಿಕವಾಗಿ 36,000 ಕೋಟಿ ರೂ. ಆದಾಯ ಸರ್ಕಾರಕ್ಕೆ ಬರುತ್ತಿದೆ. ಕುಡುಕರಿಗೆ ಪ್ರತ್ಯೇಕ ನಿಧಿ ಸ್ಥಾಪಿಸಿ ಆದಾಯದ 10% ಹಣವನ್ನ ನಿಧಿಗೆ ಮೀಸಲಿಡಬೇಕು. ಮದ್ಯಪಾನ ಪ್ರಿಯರು ಮೃತಪಟ್ಟ ಸಂದರ್ಭದಲ್ಲಿ 10 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
Drunkards protest for insurance and ambulance at every bar to minister Santosh Lad in Belagavi.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am