ಬ್ರೇಕಿಂಗ್ ನ್ಯೂಸ್
06-08-20 02:16 pm Headline Karnataka News Network ಕರ್ನಾಟಕ
ಬಳ್ಳಾರಿ: ದೀಪ ಹಚ್ಚಿ ಎಂದಾಗ ಹಚ್ವಿದೆವು, ಗಂಟೆ ಬಾರಿಸಿ ಎಂದಾಗ ಬಾರಿಸೆದುವು, ಇನ್ನುಮುಂದೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದರು.
ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ ತಿಂಗಳಿಂದ ರಾಜ್ಯ ಹಾಗೂ ರಾಷ್ಟ್ರ ಕೊರೊನಾ ಸಂಕಷ್ಟದ ನೋವಿನಿಂದ ಬಳಲುತ್ತಿದೆ. ಕೇಂದ್ರ ಸರ್ಕಾರ ಗಂಟೆ ಬಾರಿಸಿ, ದೀಪ ಹಚ್ಚಿ ಎಂದು ಹೇಳಿದ ಹಾಗೆ ನಾವು ಕುಣಿದಿದ್ದೂ ಆಗಿದೆ. ಆದರೆ ಇನ್ನು ಮುಂದೆ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ತಿವಿದರು.
ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಬ್ರೇಕ್ ಫೇಲ್ ಆಗಿದೆ. ರಾಜ್ಯದಲ್ಲಿ ಸೋಂಕಿತ ಗೋಳಿನ ಕಥೆಯನ್ನು ಸಾಕಷ್ಟು ಸಿನಿಮಾ ತೆಗೆಯಬಹುದು ಅಷ್ಟು ಜನ ನರಳುತಿದ್ದಾರೆ. ಒಬ್ಬ ಮಾಜಿ ಮಂತ್ರಿ ಕೋವಿಡ್-19 ಆಸ್ಪತ್ರೆ ಬಿಲ್ 17 ಲಕ್ಷ ರೂ. ಆಗಿದೆ. ಹೀಗಿರುವಾಗ ಬಡವರ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದರು.
ಕೋವಿಡ್-19 ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸಾವಿರಾರು ಕೋಟಿ ರೂ. ಲೂಟಿ ಹೊಡೆದಿದೆ. ಕೊರೊನಾ ಬಾರದ ಜನರನ್ನು ಸಹ ಕೋವಿಡ್ ಕೇರ್ ಗೆ ಕರೆತಂದು ಅವರ ಹೆಸರಲ್ಲಿ ಲಕ್ಷಾಂತರ ಹಣ ಲೂಟಿ ಮಾಡಿದ್ದಾರೆ. ಸರ್ಕಾರ ಖಾಸಗಿ ಆಸ್ಪತ್ರೆಯ ಜೊತೆಯಲ್ಲಿ ಶಾಮೀಲಾಗಿ ಜನರ ದುಡ್ಡು ಕೊಳ್ಳೆ ಹೊಡೆದಿದೆ. ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವಗಳನ್ನು ಹೂತು ಹಾಕಿದೆ ಈ ಸರ್ಕಾರ. ಜನರ ಶವದ ಮೇಲೆ ಹಣ ಲೂಟಿ ಮಾಡಿದ್ದಾರೆ. ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ. ಆದರೆ ಜನರ ದುಡ್ಡು ಹೊಡೆಯಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am