ಬ್ರೇಕಿಂಗ್ ನ್ಯೂಸ್
17-12-23 01:53 pm HK News Desk ಕರ್ನಾಟಕ
ಬೆಂಗಳೂರು, ಡಿ.17: ಅಮೆರಿಕಾ, ಬ್ರಿಟನ್, ಚೀನಾ, ಫ್ರಾನ್ಸ್ ದೇಶಗಳಲ್ಲಿ ಕಂಡುಬಂದಿದ್ದ ಕೊರೊನಾದ ಉಪತಳಿ ಜೆಎನ್ 1 ಭಾರತದಲ್ಲೂ ಕಂಡುಬಂದಿದೆ. ಕೇರಳದಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ.
ಜೆಎನ್ 1 ರೂಪಾಂತರಿಯು ಓಮಿಕ್ರಾನ್ ಸಬ್ ವೇರಿಯಂಟ್ ಬಿಎ 2.86 ವಂಶಕ್ಕೆ ಸೇರಿದ್ದಾಗಿದೆ. ಇದನ್ನು ಪಿರೋಲಾ ಎಂದು ಕರೆಯಲಾಗುತ್ತದೆ. ಇದು ಅಪಾಯಕಾರಿಯೇ, ಇಲ್ಲವೇ ಎನ್ನುವುದು ಇನ್ನೂ ನಿರ್ಧರಿತವಾಗಿಲ್ಲ. ಆದರೆ ಶರವೇಗದಲ್ಲಿ ಹಬ್ಬುತ್ತಿದೆ. ಕೇರಳದ ಕಣ್ಣೂರಿನಲ್ಲಿ 80 ವರ್ಷದ ವೃದ್ಧರೊಬ್ಬರು ಕೋವಿಡ್ಗೆ ಬಲಿ ಆಗಿದ್ದಾರೆ. ಎರಡು ದಿನಗಳಲ್ಲಿ 2ನೇ ಸಾವಾಗಿರುವುದು ಕಳವಳಕ್ಕೆ ಕಾರಣವಾಗಿದೆ.
ವೃದ್ಧ ಸಾವನ್ನಪ್ಪಿದ ಕಣ್ಣೂರಿನ ಪಾನೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸಭೆ, ಸಮಾರಂಭಗಳ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರವೂ ಅಲರ್ಟ್ ಆಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ನಡೆಸಿ, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ಸಚಿವರು ಪ್ರತಿಕ್ರಿಯಿಸಿ, ಮಂಗಳವಾರ ಸಭೆ ಕರೆದಿದ್ದು ಆನಂತರ ಸರ್ಕಾರಕ್ಕೆ ಸಲಹೆಗಳನ್ನ ನೀಡಲಾಗುತ್ತದೆ. ಎಲ್ಲರೂ ಎಚ್ಚರಿಕೆಯಿಂದ ಇರೋಣ. ಅನಾಹುತ ಆಗುವುದಕ್ಕೆ ಬಿಡಬಾರದು ಎಂದಿದ್ದಾರೆ. ಗಡಿ ಭಾಗಗಳನ್ನು ಸೀಲ್ ಮಾಡೋದು, ರೈಲ್ವೇ ವಿಮಾನ ನಿಲ್ದಾಣಗಳಲ್ಲಿ ಸದ್ಯಕ್ಕೆ ತಪಾಸಣೆ ಮಾಡೋದು ಅಗತ್ಯವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆಗಳನ್ನ ಹೆಚ್ಚು ಮಾಡುತ್ತೇವೆ. ರಾಜ್ಯ, ಜಿಲ್ಲಾ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆಗೆ ಸಿದ್ಧತೆ ನಡೆದಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಹೇಳಿಕೆ ನೀಡಿರುವ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, ಕೊರೊನಾ ಉಪತಳಿಯ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಎರಡು ತಿಂಗಳ ಹಿಂದೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ಈ ತಳಿ ಭಾರತೀಯರೊಬ್ಬರಲ್ಲಿ ಪತ್ತೆಯಾಗಿತ್ತು. ಆನಂತರ, ಭಾರತದ ಬೇರೆ ಕಡೆಯಲ್ಲೂ ಪತ್ತೆಯಾಗಿದೆ. ಕೇರಳದಲ್ಲಿಯೂ ಸೋಂಕು ಪತ್ತೆಯಾಗಿದ್ದು ಗಾಬರಿ ಪಡುವ ಅಗತ್ಯವಿಲ್ಲ. ಕೇರಳದಲ್ಲಿ ಆರೋಗ್ಯ ವ್ಯವಸ್ಥೆ ಉತ್ತಮ ಇದೆ. ಜಿನೋಮಿಕ್ ಸೀಕ್ವೆನ್ಸಿಂಗ್ ಮೂಲಕ ಇದನ್ನು ಪತ್ತೆಹಚ್ಚಬಹುದು. ಯಾರೂ ಚಿಂತಿತರಾಗಬೇಕಿಲ್ಲ ಎಂದಿದ್ದಾರೆ.
On December 8, Kerala found a case of COVID-19 sub-variant JN.1, PTI reported citing officials. A 79-year-old woman's sample had tested positive for influenza-like illness (ILI) on November 18, and that she had recovered from COVID-19. According to the reports, over 90 per cent of COVID-19 cases in India right now are mild and are being treated at home.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm