ಬ್ರೇಕಿಂಗ್ ನ್ಯೂಸ್
18-12-23 07:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.18: ಆರು ಮಂದಿ ಮಹಿಳೆಯರು ರಾಮನಗರ ಬಳಿಯ ಹಂಡಿ ಗುಂಡಿ ಬೆಟ್ಟಕ್ಕೆ ಟ್ರಕ್ಕಿಂಗ್ ಹೋಗಿ ಮರಳಿ ಬರಲು ದಾರಿ ಕಾಣದೆ ಸಿಕ್ಕಿಬಿದ್ದು ಕೊನೆಗೆ ಪೊಲೀಸರು ರಕ್ಷಿಸಿದ ಘಟನೆ ನಡೆದಿದೆ.
ಮಹಿಳೆಯರು ರಾಮನಗರ ಜಿಲ್ಲೆಯ ಬಸವನಪುರ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕಾರು ನಿಲ್ಲಿಸಿ ಅಲ್ಲಿಂದ ಹಂಡಿ ಗುಂಡಿ ಬೆಟ್ಟದ ಕಾಡಿನಲ್ಲಿ ಟ್ರಕ್ಕಿಂಗ್ ತೆರಳಿದ್ದರು. ಸಂಜೆ ವೇಳೆಗೆ ಬೆಟ್ಟದಿಂದ ಇಳಿದು ಬರುತ್ತಿದ್ದಾಗ ರಸ್ತೆ ಸಿಗಲಿಲ್ಲ. ರಾತ್ರಿಯಾದರೂ ಅತ್ತಿತ್ತ ಹುಡುಕಾಡಿ ರಸ್ತೆ ಸಿಗದೇ ಇದ್ದುದರಿಂದ 7.15ರ ಸುಮಾರಿಗೆ 112 ನಂಬರಿಗೆ ಫೋನ್ ಮಾಡಿದ್ದರು.
ಕೂಡಲೇ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಗಸ್ತಿನಲ್ಲಿದ್ದ ರಾಜೇಶ್ ಮತ್ತು ರಮೇಶ್ ಆ ಭಾಗದಲ್ಲೇ ಇದ್ದುದರಿಂದ ಅವರಿಗೆ ಸಂದೇಶ ಹೋಗುತ್ತದೆ. 7.30ರ ಸುಮಾರಿಗೆ ಮಹಿಳೆಯರನ್ನು ಫೋನಲ್ಲಿ ಸಂಪರ್ಕಿಸಿದ ಪೊಲೀಸರು, ನೀವು ಯಾವುದೇ ಆತಂಕ ಪಡುವುದು ಬೇಡ. ನಾವು ಹುಡುಕಿ ಬರುತ್ತೇವೆ ಎಂದು ಹೇಳಿದ್ದಾರೆ. ಆದರೆ ಪೊಲೀಸರ ವಾಹನವನ್ನೂ ಬೆಟ್ಟಕ್ಕೆ ಒಯ್ಯಲಾಗದೆ ಅರ್ಧಕ್ಕೆ ನಿಲ್ಲಿಸಿದ್ದಾರೆ.
ರಾತ್ರಿ 8.30ರ ವೇಳೆಗೆ ಸ್ಥಳೀಯ ಸಾರ್ವಜನಿಕರ ಸಹಾಯ ಪಡೆದು ಪೊಲೀಸರು ಟಾರ್ಚ್ ಲೈಟ್ ಹಿಡಿದು ಕಾಡಿನಲ್ಲಿ ಹುಡುಕಾಡಿದ್ದಾರೆ. ಎರಡು ಕಿಮೀ ಉದ್ದಕ್ಕೆ ಕಾಡಿನಲ್ಲಿ ನಡೆದ ಬಳಿಕ ಮಹಿಳೆಯರು ಸಿಕ್ಕಿದ್ದು, ಮರಳಿ ರಸ್ತೆಗೆ ತಲುಪಿಸಿದ್ದಾರೆ. ಹಂಡಿ ಗುಂಡಿ ಬೆಟ್ಟದಲ್ಲಿ ಕರಡಿ, ಚಿರತೆಗಳಿದ್ದು, ಅದೃಷ್ಟವಶಾತ್ ಮಹಿಳೆಯರಿಗೆ ತೊಂದರೆ ಮಾಡಿಲ್ಲ. 112 ಗೆ ಕರೆ ಮಾಡಲು ಫೋನ್ ನೆಟ್ವರ್ಕ್ ಸಿಕ್ಕಿದ್ದರಿಂದ ಬಚಾವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯರು ಬನ್ನೇರುಘಟ್ಟ ಆಸುಪಾಸಿನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವವರಾಗಿದ್ದಾರೆ.
Six city women lost their way during a trekking expedition to a hill in Ramanagara district Saturday and were rescued by 112 staff.The women dialled 112 to reach the Emergency Response Support System (ERSS) after losing their way. BR Ravikanthe Gowda, IGP (Central range) confirmed the rescue.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm