ಬ್ರೇಕಿಂಗ್ ನ್ಯೂಸ್
18-12-23 10:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.18: ರಾಜ್ಯದಲ್ಲಿ ದೊಡ್ಡ ಪ್ರಮಾಣದ ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಸಂಗತಿಯನ್ನು ಎನ್ಐಎ ಅಧಿಕಾರಿಗಳು ಪತ್ತೆ ಮಾಡಿದ್ದು, ಐಸಿಸ್ ನೆಟ್ವರ್ಕ್ ಸಂಬಂಧ ಇರಿಸಿಕೊಂಡಿದ್ದ ಎಂಟು ಮಂದಿ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.
ಕರ್ನಾಟಕ, ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ದೆಹಲಿಯ 19 ಕಡೆಗಳಲ್ಲಿ ಸೋಮವಾರ ಏಕಕಾಲದಲ್ಲಿ ಎನ್ಐಎ ದಾಳಿ ನಡೆಸಿದ್ದು, ಐಸಿಸ್ ಉಗ್ರರು ರೂಪಿಸಿದ್ದ ವಿಧ್ವಂಸಕ ಕೃತ್ಯವನ್ನು ವಿಫಲಗೊಳಿಸಿದ್ದಾರೆ. ಬಳ್ಳಾರಿಯಲ್ಲಿ ದಾಳಿ ನಡೆಸಿದ ವೇಳೆ ಶಂಕಿತ ಉಗ್ರರಾದ ಮಿನಾಜ್ ಅಲಿಯಾಸ್ ಮೊಹಮ್ಮದ್ ಸುಲೇಮಾನ್, ಸೈಯದ್ ಸಮೀರ್, ಬೆಂಗಳೂರಿನಲ್ಲಿ ಮುನಿರುದ್ದೀನ್, ಸೈಯದ್ ಸಮೀವುಲ್ಲಾ, ಮೊಹಮ್ಮದ್ ಮುಜಾಮಿಲ್ ಎಂಬವರನ್ನು ಬಂಧಿಸಲಾಗಿದೆ. ಇದೇ ವೇಳೆ, ಮುಂಬೈನಲ್ಲಿ ಅನಾಸ್ ಇಕ್ಬಾಲ್ ಶೇಖ್, ದೆಹಲಿಯಲ್ಲಿ ಶಿಯಾನ್ ರಹಿಮಾನ್ ಅಲಿಯಾಸ್ ಹುಸೇನ್ ಹಾಗೂ ಜಾರ್ಖಂಡಿನಲ್ಲಿ ಮೊಹಮ್ಮದ್ ಶಹಬಾಜ್ ಅಲಿಯಾಸ್ ಜುಲ್ಫೀಕರ್ ಅಲಿಯಾಸ್ ಗುಡ್ಡುನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಬಾಂಬ್ ತಯಾರಿಸಲು ಉಗ್ರರು ಸಂಗ್ರಹಿಸಿದ್ದ ಸಲ್ಫರ್, ಪೊಟ್ಯಾಶಿಯಂ ನೈಟ್ರೇಟ್, ಗನ್ ಪೌಡರ್, ಇದ್ದಿಲು, ಎಥೆನಾಲ್ ಅನ್ನು ವಶಕ್ಕೆ ಪಡೆಯಲಾಗಿದೆ. ಇದಲ್ಲದೆ, ದಾಳಿ ಸಂದರ್ಭದಲ್ಲಿ ಇಲೆಕ್ಟ್ರಾನಿಕ್ ಉಪಕರಣಗಳು, ಸ್ಮಾರ್ಟ್ ವಾಚ್ ಗಳು, ಕೆಲವು ದಾಖಲೆಗಳನ್ನೂ ವಶಕ್ಕೆ ಪಡೆದಿದ್ದಾರೆ. ಜಿಹಾದ್, ಖಿಲಾಫತ್ ಹೆಸರಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಐಸಿಸ್ ನೆಟ್ವರ್ ಅಡಿ ತರಲು ಸಂಚು ರೂಪಿಸಿದ್ದರು. ಬಳ್ಳಾರಿಯಲ್ಲಿ ಹಲವು ಕಾಲೇಜು ವಿದ್ಯಾರ್ಥಿಗಳು ಈ ಸಂಚಿನಲ್ಲಿ ಸೇರಿಕೊಂಡಿದ್ದರು ಅನ್ನುವುದನ್ನು ಪತ್ತೆ ಮಾಡಿದ್ದಾರೆ.
ಬಳ್ಳಾರಿ ಮೂಲದ ಮಿನಾಜ್ ಅಲಿಯಾಸ್ ಮೊಹಮ್ಮದ್ ಸುಲೇಮಾನ್, ಬಳ್ಳಾರಿಯನ್ನೇ ಕೇಂದ್ರ ಸ್ಥಾನ ಮಾಡಿಕೊಂಡು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ. ಧರ್ಮದ ಹೆಸರಿನಲ್ಲಿ ಯುವಕರನ್ನು ಪ್ರಚೋದಿಸಿ ಭಯೋತ್ಪಾದನಾ ಕೃತ್ಯಕ್ಕೆ ಪ್ರೇರೇಪಣೆ ನೀಡುತ್ತಿದ್ದ. ಈತನೇ ಸ್ಫೋಟ ಸಂಚಿನ ರೂವಾರಿ ಅನ್ನುವುದನ್ನು ಎನ್ಐಎ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಐಇಡಿ ಸ್ಫೋಟಕಗಳನ್ನು ಬಳಸ್ಕೊಂಡು ಸ್ಫೋಟಕ್ಕೆ ಸಂಚು ರೂಪಿಸಿದ್ದು ಕೆಲವೇ ದಿನಗಳಲ್ಲಿ ಕೃತ್ಯ ನಡೆಸಲು ಯೋಜಿಸಿದ್ದರು ಎಂದು ಎನ್ಐಎ ಮಾಹಿತಿ ನೀಡಿದೆ.
NIA Raid in Ballari, eight arrested over link to banned organizations and ISIS, explosives seized.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 02:44 pm
HK News Staffer
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm