ಬ್ರೇಕಿಂಗ್ ನ್ಯೂಸ್
19-12-23 02:49 pm HK News Desk ಕರ್ನಾಟಕ
ಕಾರವಾರ, ಡಿ 19: ಸೈಂಟ್ ಮೈಕಲ್ ಶಾಲೆಯಲ್ಲಿ ಡೊನೇಶನ್ ಪೂರ್ಣ ಪ್ರಮಾಣದಲ್ಲಿ ಪಾವತಿಸದ ವಿದ್ಯಾರ್ಥಿಗಳನ್ನು ಶಾಲಾ ಟೆಸ್ಟ್ ನಿಂದ ಹೊರಗಿಟ್ಟ ಘಟನೆ ಮಂಗಳವಾರ ನಡೆದಿದೆ
ನಗರದ ಖಾಸಗಿ ಶಾಲೆ ಸೈಂಟ್ ಮೈಕಲ್ ಗೆ ವಿದ್ಯಾರ್ಥಿಗಳ ಪೋಷಕರು ಶಾಲೆಯ ಡೊನೇಷನ್ ಶುಲ್ಕ ಪಾವತಿಸದಕ್ಕೆ ವಿದ್ಯಾರ್ಥಿಗಳಿಗೆ ಉಪ ಪರೀಕ್ಷೆ ಬರೆಯಲು ನಿರಾಕರಿಸಿದ್ದಲ್ಲದೇ, ಮುಖ್ಯೋಪಾಧ್ಯಾಯರ ಕೊಠಡಿಯ ಹೊರಗೆ ವಿದ್ಯಾರ್ಥಿಗಳನ್ನು ಕೂರಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ನಗರದ ಸರ್ಕಾರಿ ಅನುದಾನ ರಹಿತ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ನೆಡೆದಿದೆ.
ಮುಖ್ಯಶಿಕ್ಷಕಿ ಕ್ರಿಸ್ಟಿನಾ ಜೋಸೆಪ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದಂತೆ ತಡೆದಿದ್ದಾರೆ. ಫಾರ್ಮೆಟಿವ್ ಅಸೈನ್ಮೆಂಟ್ ಎಂಬ ಪರೀಕ್ಷೆ ಬರೆಯಲು 6,7 ಮತ್ತು 8 ನೇ ತರಗತಿಯ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುಳಿತು ಕೊಳ್ಳಲು ನಿರಾಕರಣೆ ಮಾಡಲಾಗಿದೆ.
ಪ್ರತಿ ವಿದ್ಯಾರ್ಥಿಯಿಂದ ವರ್ಷಕ್ಕೆ 20 ಸಾವಿರ ಡೊನೇಷನ್ ಶಾಲಾ ಆಡಳಿತ ಮಂಡಳಿಯು ಪೋಷಕರಿಂದ ಸಂಗ್ರಹಿಸುತ್ತದೆ. ಹಲವು ಜನ ಕಂತಿನ ಮೂಲಕ ನೀಡುವುದರಿಂದ, ಕೆಲವು ಪೋಷಕರು ಪೂರ್ಣ ಹಣ ತುಂಬಿರಲಿಲ್ಲ. ಈ ಹಿನ್ನಲೆಯಲ್ಲಿ 6,7,8 ನೇತರಗತಿಯ ಶುಲ್ಕ ತುಂಬದ ಮಕ್ಕಳಿಗೆ ಪರೀಕ್ಷೆ ನಿರಾಕರಣೆ ಮಾಡಿ ದೌರ್ಜನ್ಯ ವೆಸಗಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಸರಕಾರ ಇಂತಹ ಖಾಸಗಿ ಶಾಲೆಗಳ ವಿರುದ್ದ ಕ್ರಮ ಜರುಗಿಸಬೇಕಾಗಿದೆ ಎಂದು ಪೋಷರು ಒತ್ತಾಯಿಸಿದ್ದಾರೆ.
ಶಾಲಾ ಆಡಳಿತ ಮಂಡಳಿ ಹಾಗೂ ಕೆಲ ಪೋಷಕರ ಮಧ್ಯೆ ಕೆಲ ತಿಂಗಳುಗಳಿಂದ ಡೋನೇಶನ್ ಸಂಬಂಧ ಘರ್ಷಣೆ ನಡೆಯುತ್ತಿದೆ.
St Michael School Karwar punishes Students for not paying donation fees, pictures go viral. The school has not permitted students not to write their exams without paying the donation fees.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 08:22 pm
Mangalore Correspondent
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm