Mysore, suicide, dowry: ಮೈಸೂರು ; ಮದುವೆಗೂ ಮುನ್ನ ವರದಕ್ಷಿಣೆಗೆ ಹಿಂಸೆ, XUV ಕಾರು, ಚಿನ್ನಾಭರಣ ನೀಡದಿದ್ದರೆ ಮದುವೆ ನಡೆಯುವುದಿಲ್ಲ ಎಂದು ಧಮ್ಕಿ , ಆತ್ಮಹತ್ಯೆಗೆ ಶರಣಾದ 21ರ ಯುವತಿ 

19-12-23 08:05 pm       HK News Desk   ಕರ್ನಾಟಕ

ಮದುವೆಗೂ ಮುನ್ನ ವರದಕ್ಷಿಣೆಗೆ ಒತ್ತಾಯಿಸಿದ್ದರಿಂದ ಮನನೊಂದ ಊಟಿ ಮೂಲದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿ. ಕವೀಶ(21) ಆತ್ಮಹತ್ಯೆಗೆ ಶರಣಾದ ಯುವತಿ.

ಮೈಸೂರು, ಡಿ 19: ಮದುವೆಗೂ ಮುನ್ನ ವರದಕ್ಷಿಣೆಗೆ ಒತ್ತಾಯಿಸಿದ್ದರಿಂದ ಮನನೊಂದ ಊಟಿ ಮೂಲದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿ. ಕವೀಶ(21) ಆತ್ಮಹತ್ಯೆಗೆ ಶರಣಾದ ಯುವತಿ.

ಪುತ್ರಿ ಕವೀಶ, ಕಿರಣ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇಬ್ಬರ ಕಡೆಯ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ಸೂಚಿಸಿದ್ದರಿಂದ ಕಳೆದ ಸೆ.17 ರಂದು ನಿಶ್ಚಿತಾರ್ಥ ಕೂಡ ನೆರವೇರಿತ್ತು. ಇದರ ನಡುವೆ, ಕಿರಣ್ ತಾಯಿ ಮತ್ತು ಸೋದರ ಮಾವ ಚಿನ್ನಾಭರಣ ಮತ್ತು ಎಕ್ಸ್​ಯುವಿ ಕಾರನ್ನು ವರದಕ್ಷಿಣೆಯಾಗಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ವರದಕ್ಷಿಣೆ ನೀಡದಿದ್ದರೆ ಮದುವೆ ನಡೆಯುವುದಿಲ್ಲ ಎಂದು ಸಹ ತಿಳಿಸಿದ್ದರು. ಇದರಿಂದ ಮನನೊಂದ ಕವೀಶ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ'' ಎಂದು ಆರೋಪಿಸಿ ಮೃತ ಪುತ್ರಿಯ ತಂದೆಯು ಕುವೆಂಪು ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Upset over demanding dowry before marriage, a young woman from Ooty committed suicide in Mysuru on Dec.19. V. The deceased has been identified as Kavish (21).