ಬ್ರೇಕಿಂಗ್ ನ್ಯೂಸ್
20-12-23 07:39 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.20: ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚತ್ತುಕೊಂಡಿದ್ದು, ವಿಧಾನಸೌಧದ ಭದ್ರತೆಯ ಹೊಣೆಯನ್ನು ರಾಜ್ಯ ಪೊಲೀಸರಿಗೆ ನೀಡಲು ಮುಂದಾಗಿದೆ.
ವಿಧಾನಸೌಧ ಒಳಗಿನ ಭದ್ರತೆಯ ಜವಾಬ್ದಾರಿಯನ್ನು ಹಲವಾರು ಇಲಾಖೆಗಳು ಹೊತ್ತುಕೊಂಡಿವೆ. ಆದರೆ, ಒಂದು ವೇಳೆ ಭದ್ರತಾ ವೈಫಲ್ಯ ಎದುರಾದರೆ ಅದರ ಹೊಣೆಗಾರಿಕೆಯನ್ನು ನಿರ್ದಿಷ್ಟ ಇಲಾಖೆಯ ಮೇಲೆ ಹೊರಿಸಲು ಸಾಧ್ಯವಾಗಲ್ಲ. ಹೀಗಾಗಿ ಅಧಿವೇಶನ ಸಂದರ್ಭದಲ್ಲಿ ಭದ್ರತೆ ಹೆಚ್ಚಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಈಗಾಗಲೇ ಶಾಸಕರು ಮತ್ತು ವಿಧಾನಸೌಧಕ್ಕೆ ಭೇಟಿ ನೀಡುವವರ ಸುರಕ್ಷತೆಯ ಜವಾಬ್ದಾರಿ ಪೊಲೀಸರ ಮೇಲೆ ಇದೆ. ಹೀಗಾಗಿ ವಿಧಾನಸೌಧ ಕಟ್ಟಡದ ಒಳ ಹೊರಗಿನ ಭದ್ರತೆಯ ಹೊಣೆಯನ್ನೂ ಪೊಲೀಸರಿಗೇ ನೀಡುವ ಕುರಿತು ಚಿಂತನೆಗಳು ನಡೆಯುತ್ತಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ವಿಧಾನಸೌಧ ಹಾಗೂ ಸುತ್ತಮುತ್ತ ಹೈಟೆಕ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆ ಇದೆ. ಕ್ಯಾಮೆರಾಗಳನ್ನು ಅಳವಡಿಸಲು 10-12 ಏಜೆನ್ಸಿಗಳು ಮುಂದೆ ಬಂದಿವೆ. ವಿಧಾನಸೌಧ ಜವಾಬ್ದಾರಿಯನ್ನು ಪೊಲೀಸ್ ಇಲಾಖೆಗೆ ನೀಡಿದಲ್ಲಿ ಪೊಲೀಸರು ಹೈಟೆಕ್ ಸೆಕ್ಯುರಿಟಿ ಗ್ಯಾಜೆಟ್ಗಳ ಮೇಲೆ ನಿಗಾ ಇಡುತ್ತಾರೆಂದು ತಿಳಿಸಿದ್ದಾರೆ.
ಇದಲ್ಲದೆ, ಸಂದರ್ಶಕರಿಗೆ ನೀಡುವ ಪಾಸ್ಗಳಿಗೆ ಅಂತಿಮ ಅನುಮೋದನೆ ನೀಡುವ ಅಧಿಕಾರವನ್ನು ಪೊಲೀಸ್ ಇಲಾಖೆಗೆ ನೀಡಲಾಗುವುದು. ಇದು ಸುರಕ್ಷತೆಯ ವಿಷಯವಾಗಿದ್ದು, ಪೊಲೀಸರಿಗೆ ಇದರ ಜವಾಬ್ದಾರಿಯನ್ನು ನೀಡಲಾಗುವುದು ಎಂದರು.
The incident of miscreants attacking the Parliament House in Bengaluru has shocked the entire nation. Following the incident, the state government has woken up and has decided to hand over the responsibility of security of vidhana soudha to the police.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 02:44 pm
HK News Staffer
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm