vidhana soudha, planning security: ಸಂಸತ್ ಭದ್ರತಾ ವೈಫಲ್ಯ ಹಿನ್ನೆಲೆ ; ವಿಧಾನಸೌಧ ಭದ್ರತೆ ಹೆಚ್ಚಿಸಲು ಒತ್ತು, ಹೈಟೆಕ್ ಸಿಸಿ ಕ್ಯಾಮೆರಾ, ಪೊಲೀಸರಿಗೆ ಭದ್ರತೆ ಹೊಣೆ ; ಸ್ಪೀಕರ್ ಖಾದರ್ 

20-12-23 07:39 pm       Bangalore Correspondent   ಕರ್ನಾಟಕ

ಸಂಸತ್‌ ಭವನದಲ್ಲಿ ಭದ್ರತಾ ವೈಫಲ್ಯ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚತ್ತುಕೊಂಡಿದ್ದು, ವಿಧಾನಸೌಧದ ಭದ್ರತೆಯ ಹೊಣೆಯನ್ನು ರಾಜ್ಯ ಪೊಲೀಸರಿಗೆ ನೀಡಲು ಮುಂದಾಗಿದೆ. 

ಬೆಂಗಳೂರು, ಡಿ.20: ಸಂಸತ್‌ ಭವನದಲ್ಲಿ ಭದ್ರತಾ ವೈಫಲ್ಯ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚತ್ತುಕೊಂಡಿದ್ದು, ವಿಧಾನಸೌಧದ ಭದ್ರತೆಯ ಹೊಣೆಯನ್ನು ರಾಜ್ಯ ಪೊಲೀಸರಿಗೆ ನೀಡಲು ಮುಂದಾಗಿದೆ. 

ವಿಧಾನಸೌಧ ಒಳಗಿನ ಭದ್ರತೆಯ ಜವಾಬ್ದಾರಿಯನ್ನು ಹಲವಾರು ಇಲಾಖೆಗಳು ಹೊತ್ತುಕೊಂಡಿವೆ. ಆದರೆ, ಒಂದು ವೇಳೆ ಭದ್ರತಾ ವೈಫಲ್ಯ ಎದುರಾದರೆ ಅದರ ಹೊಣೆಗಾರಿಕೆಯನ್ನು ನಿರ್ದಿಷ್ಟ ಇಲಾಖೆಯ ಮೇಲೆ ಹೊರಿಸಲು ಸಾಧ್ಯವಾಗಲ್ಲ. ಹೀಗಾಗಿ ಅಧಿವೇಶನ ಸಂದರ್ಭದಲ್ಲಿ ಭದ್ರತೆ ಹೆಚ್ಚಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಈಗಾಗಲೇ ಶಾಸಕರು ಮತ್ತು ವಿಧಾನಸೌಧಕ್ಕೆ ಭೇಟಿ ನೀಡುವವರ ಸುರಕ್ಷತೆಯ ಜವಾಬ್ದಾರಿ ಪೊಲೀಸರ ಮೇಲೆ ಇದೆ. ಹೀಗಾಗಿ ವಿಧಾನಸೌಧ ಕಟ್ಟಡದ ಒಳ ಹೊರಗಿನ ಭದ್ರತೆಯ ಹೊಣೆಯನ್ನೂ ಪೊಲೀಸರಿಗೇ ನೀಡುವ ಕುರಿತು ಚಿಂತನೆಗಳು ನಡೆಯುತ್ತಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.

ವಿಧಾನಸೌಧ ಹಾಗೂ ಸುತ್ತಮುತ್ತ ಹೈಟೆಕ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆ ಇದೆ. ಕ್ಯಾಮೆರಾಗಳನ್ನು ಅಳವಡಿಸಲು 10-12 ಏಜೆನ್ಸಿಗಳು ಮುಂದೆ ಬಂದಿವೆ. ವಿಧಾನಸೌಧ ಜವಾಬ್ದಾರಿಯನ್ನು ಪೊಲೀಸ್ ಇಲಾಖೆಗೆ ನೀಡಿದಲ್ಲಿ ಪೊಲೀಸರು ಹೈಟೆಕ್ ಸೆಕ್ಯುರಿಟಿ ಗ್ಯಾಜೆಟ್‌ಗಳ ಮೇಲೆ ನಿಗಾ ಇಡುತ್ತಾರೆಂದು ತಿಳಿಸಿದ್ದಾರೆ.

ಇದಲ್ಲದೆ, ಸಂದರ್ಶಕರಿಗೆ ನೀಡುವ ಪಾಸ್‌ಗಳಿಗೆ ಅಂತಿಮ ಅನುಮೋದನೆ ನೀಡುವ ಅಧಿಕಾರವನ್ನು ಪೊಲೀಸ್ ಇಲಾಖೆಗೆ ನೀಡಲಾಗುವುದು. ಇದು ಸುರಕ್ಷತೆಯ ವಿಷಯವಾಗಿದ್ದು, ಪೊಲೀಸರಿಗೆ ಇದರ ಜವಾಬ್ದಾರಿಯನ್ನು ನೀಡಲಾಗುವುದು ಎಂದರು.

The incident of miscreants attacking the Parliament House in Bengaluru has shocked the entire nation. Following the incident, the state government has woken up and has decided to hand over the responsibility of security of vidhana soudha to the police.