ಬ್ರೇಕಿಂಗ್ ನ್ಯೂಸ್
21-12-23 03:59 pm HK News Desk ಕರ್ನಾಟಕ
ಬಾಗಲಕೋಟೆ, ಡಿ 21: ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಮತ್ತೊಬ್ಬ ಟೆಕ್ಕಿಯನ್ನು ದೆಹಲಿ ಪೊಲೀಸರು ಬುಧವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. 30 ವರ್ಷದ ಸಾಯಿಕೃಷ್ಣ ಜಗಲಿ ವಶಕ್ಕೆ ಪಡೆಯಲಾದ ಟೆಕ್ಕಿ ಆಗಿದ್ದಾರೆ. ಸದ್ಯ ದೆಹಲಿ ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ಧಾರೆ.
’’ತಮ್ಮ ಪುತ್ರನನ್ನು ವಿಚಾರಣೆಗಾಗಿ ಕರೆದುಕೊಂಡು ಹೋಗುತ್ತೇವೆ ಎಂದು ಮಾಹಿತಿ ನೀಡಿ, ಕರೆದುಕೊಂಡು ಹೋಗಿದ್ದಾರೆ. ಮನೋರಂಜನ್ ಮತ್ತು ನನ್ನ ಮಗ ರೂಮ್ಮೇಟ್ಗಳು ಆಗಿದ್ದರಿಂದ ಇಬ್ಬರ ಸಮಕ್ಷಮ ವಿಚಾರಣೆ ಮಾಡಲಿದ್ದಾರೆ. ಮತ್ತೆ ಎರಡು ದಿನದಲ್ಲಿ ವಾಪಸ್ ಕಳುಹಿಸಲಿದ್ದಾರೆ. ಬಂದ ನಂತರ ಇಬ್ಬರು ಸೇರಿ ಸಮಗ್ರ ಮಾಹಿತಿ ನೀಡುತ್ತೇವೆ‘‘ ಎಂದು ಸಾಯಿಕೃಷ್ಣ ತಂದೆಯಾಗಿರುವ ನಿವೃತ್ತ ಡಿವೈಎಸ್ಪಿ ವಿಠಲ್ ಜಗಲಿ ತಿಳಿಸಿದರು.
ಈ ಬಗ್ಗೆ ಸಾಯಿಕೃಷ್ಣ ಸಹೋದರಿ ಮಾತನಾಡಿದ್ದು, ''ದೆಹಲಿಯಿಂದ ಇಲ್ಲಿಗೆ ಪೊಲೀಸರು ಆಗಮಿಸಿದ್ದರು. ಕೆಲ ಸಮಯ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಪೊಲೀಸರು ಕೇಳಿದ ಪ್ರಶ್ನೆಗೆ ಸಾಯಿಕೃಷ್ಣ ಸರಿಯಾಗಿ ಮಾಹಿತಿ ನೀಡಿದ. ಆದರೆ, ಹೆಚ್ಚಿನ ಮಾಹಿತಿ ಅವಶ್ಯಕತೆ ಇರುವುದರಿಂದ ಸಾಯಿಕೃಷ್ಣನನ್ನು ದೆಹಲಿಗೆ ಕರೆದುಕೊಂಡು ಹೋಗಬೇಕಾಗುತ್ತದೆ ಎಂದು ಪೊಲೀಸರು ತಿಳಿಸಿದರು. ನಾವು ಕರೆದುಕೊಂಡು ಹೋಗುವಂತೆ ಹೇಳಿದೆವು. ಸಾಯಿಕೃಷ್ಣ ಮತ್ತು ಮನೋರಂಜನ್ ಸೇರಿ ಒಟ್ಟು ಮೂವರು ಓದುವಾಗ ರೂಮೆಟ್ ಆಗಿದ್ದರು. ಇಲ್ಲಿಗೆ ಯಾವತ್ತೂ ಆತ ಬಂದಿಲ್ಲ. ನನ್ನ ತಮ್ಮ ದ್ವಿತೀಯ ಪಿಯುಸಿಯನ್ನು ಬಾಗಲಕೋಟೆಯಲ್ಲಿ ಮುಗಿಸಿದ. ಬಳಿಕ ಇಂಜಿನಿಯರಿಂಗ್ ಅನ್ನು ಬೆಂಗಳೂರಿನಲ್ಲಿ ಪೂರ್ಣಗೊಳಿಸಿದ್ದ. ಕೆಲವು ದಿನ ಖಾಸಗಿ ಕಂಪನಿಯೊಂದರಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ಮಾಡಿದ. ಬಳಿಕ ಕೆಲಸ ಬಿಟ್ಟು ಇದೀಗ ತನ್ನದೇ ಆದ ಆ್ಯಪ್ವೊಂದನ್ನು ಅಭಿವೃದ್ಧಿಪಡಿಸುತ್ತಿದ್ದಾನೆ. ಸದ್ಯ ಕೇಳಿ ಬರುತ್ತಿರುವ ಮನೋರಂಜನ್ ಪ್ರಕರಣಕ್ಕೂ ನಮ್ಮ ಸಹೋದರನಿಗೂ ಯಾವುದೇ ರೀತಿಯ ಸಂಬಂಧ ಇಲ್ಲ. ರೂಮೆಟ್ ಆಗಿದ್ದರಿಂದ ಆತನನ್ನು ಕರೆದುಕೊಂಡು ಹೋಗಿದ್ದಾರೆ. ಪೊಲೀಸರ ಯಾವುದೇ ವಿಚಾರಣೆಗೂ ಸಿದ್ಧ. ತಪ್ಪು ಮಾಡಿಲ್ಲ ಎಂದರೆ ಹೆದರುವುದು ಏತಕ್ಕೆ'' ಎಂದು ಪ್ರಶ್ನಿಸಿದರು.
Delhi Police has detained two more people for questioning in the massive Parliament security breach case. One of them is identified as Sai Krishna, son of retired Deputy Superintendent of Police from Karnataka’s Bagalkote.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
19-05-26 10:47 pm
HK News Desk
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm