ಬ್ರೇಕಿಂಗ್ ನ್ಯೂಸ್
18-11-20 05:13 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 18: ಚುನಾವಣಾ ತಕರಾರು ಅರ್ಜಿ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ನ್ಯಾಯಾಧೀಶರು 5 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ.
ಖಂಡ್ರೆ ವಿರುದ್ಧ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಕೆ.ಸಿದ್ರಾಮ ಎಂಬವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆಸಿದ್ದಾರೆ, ಅಲ್ಲದೆ, ಚುನಾವಣಾ ಆಯೋಗಕ್ಕೆ ಆಸ್ತಿ ಘೋಷಣೆ ಮಾಡಿಕೊಂಡಿಲ್ಲ ಎಂದು ದೂರು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಖಂಡ್ರೆ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದ್ದರು.

ಕಳೆದ ಬಾರಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈಶ್ವರ್ ಖಂಡ್ರೆಗೆ ನೋಟೀಸ್ ಜಾರಿ ಮಾಡಿತ್ತು. ಆಬಳಿಕ ಹಲವು ಬಾರಿ ಅರ್ಜಿ ವಿಚಾರಣೆಗೆ ಬಂದರೂ, ಖಂಡ್ರೆ ಕೋರ್ಟಿಗೆ ಹಾಜರಾಗಿರಲಿಲ್ಲ. ಇದರಿಂದ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಇದಕ್ಕೆ ಖಂಡ್ರೆ ಪರ ವಕೀಲರು, ತನ್ನ ಪಿಎಗೆ ಮರೆವು ರೋಗ ಇದೆ, ಹಾಗಾಗಿ ಕೇಸ್ ಬಗ್ಗೆ ಗಮನಕ್ಕೆ ಬಂದಿರಲಿಲ್ಲ ಖಂಡ್ರೆ ಪರವಾಗಿ ಪ್ರಮಾಣ ಪತ್ರ ಹಾಜರುಪಡಿಸಿದ್ದರು.
ಇಂದು ಮತ್ತೆ ಅದೇ ಪ್ರಕರಣ ವಿಚಾರಣೆಗೆ ಬಂದಿದ್ದು, ನ್ಯಾಯಾಧೀಶರು ಗರಂ ಆಗಿದ್ದಾರೆ. ಅಲ್ಲದೆ, ಕೋರ್ಟಿಗೆ ಹಾಜರಾಗದೆ ಅಗೌರವ ತೋರಿದ ಶಾಸಕ ಈಶ್ವರ ಖಂಡ್ರೆಗೆ 5 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ಸಿಎಂ ಕೊರೊನಾ ಪರಿಹಾರ ನಿಧಿಗೆ ಪಾವತಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
High Court has fined Rs 5 lakhs to Kpcc Working President Eshwar Khandre for not attending the court on the dates of case.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm