ಕರ್ನಾಟಕ ಬಂದ್ ಮಾಡಲು ಅವಕಾಶ ನೀಡುವುದಿಲ್ಲ ; ಯಡಿಯೂರಪ್ಪ

18-11-20 05:32 pm       Bangalore Correspondent   ಕರ್ನಾಟಕ

ರಾಜ್ಯದಲ್ಲಿರುವ ಮರಾಠಿ ಸಮುದಾಯದವರು ಕೂಡ ಕನ್ನಡಿಗರೇ..ಬಲವಂತದ ಬಂದ್ ಮಾಡುವುದಕ್ಕೆ ಯಾರಿಗೂ ಅವಕಾಶ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ನವದೆಹಲಿ, ನವೆಂಬರ್ 18: ರಾಜ್ಯದಲ್ಲಿರುವ ಮರಾಠಿ ಸಮುದಾಯದವರು ಕೂಡ ಕನ್ನಡಿಗರೇ.. ಮರಾಠಿ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಡಿ.5ರಂದು ನಡೆಸಲು ನಿರ್ಧರಿಸಿರುವ ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ. ಬಲವಂತದ ಬಂದ್ ಮಾಡುವುದಕ್ಕೆ ಯಾರಿಗೂ ಅವಕಾಶ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಸಂಪುಟ ವಿಸ್ತರಣೆ ಕುರಿತು ಮಾತನಾಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಮಾತನಾಡಲು ದೆಹಲಿಗೆ ಆಗಮಿಸಿರುವ ಯಡಿಯೂರಪ್ಪ, ಮರಾಠಿ ಅಭಿವೃದ್ಧಿ ಪ್ರಾಧಿಕಾರದ ಬಗ್ಗೆ ಸಮರ್ಥಿಸಿಕೊಂಡರು. ಮರಾಠಿ ಸಮುದಾಯ ಬೆಳಗಾವಿಯಲ್ಲಿ ಮಾತ್ರ ಇರುವುದಲ್ಲ. ಬದಲಿಗೆ ರಾಜ್ಯದ ಎಲ್ಲೆಡೆ ಇದ್ದಾರೆ. ಬೇರೆ ಬೇರೆ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ಇರುವಾಗ ಮರಾಠಿಗರಿಗೆ ಕೊಟ್ಟರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಮರಾಠಿ ಸಮುದಾಯದ ಹಿಂದುಳಿದವರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವುದಾಗಿ ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಪುನಾರಚನೆ ಮಾಡಬೇಕೇ ಎಂಬ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚಿಸಲಾಗುವುದು. ಆಬಳಿಕವೇ ಸಂಪುಟದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಡಿ.7ರ ಬಳಿಕ ಚಳಿಗಾಲದ ಅಧಿವೇಶನ ನಡೆಯಲಿದೆ, ಅದಕ್ಕೂ ಮುನ್ನ ಸಂಪುಟ ವಿಸ್ತರಣೆ ಆಗಲಿದೆಯೇ ಎನ್ನುವ ಬಗ್ಗೆ ಯಡಿಯೂರಪ್ಪ ಸುಳಿವು ಬಿಟ್ಟುಕೊಟ್ಟಿಲ್ಲ. 

No Possibilities of Karnataka Bandh over establishmentet of Maratha Authority on December 5th confirms Karnataka CM B S Yeddyurappa. Also warns kannada organisations not to take any steps as action will be taken.