BJP, president B Y Vijayendra: ರಾಜ್ಯ ಬಿಜೆಪಿಗೆ ವಿಜಯೇಂದ್ರ ಹೊಸ ಟೀಮ್ ಅಸ್ತಿತ್ವಕ್ಕೆ, ಸುನಿಲ್ ಕುಮಾರ್, ಬೃಜೇಶ್ ಚೌಟ, ಪ್ರೀತಂ ಗೌಡ, ಪಿ. ರಾಜೀವ್ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ 

23-12-23 09:58 pm       Bangalore Correspondent   ಕರ್ನಾಟಕ

ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರ ಹೊಸತಾಗಿ ರಾಜ್ಯ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್, ಪಿ. ರಾಜೀವ್, ಎನ್.ಎಸ್. ನಂದೀಶ ರೆಡ್ಡಿ, ಜಿ. ಪ್ರೀತಂ ಗೌಡ ಅವರನ್ನು ನೇಮಿಸಿದ್ದಾರೆ.

ಬೆಂಗಳೂರು, ಡಿ.23: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರ ಹೊಸತಾಗಿ ರಾಜ್ಯ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್, ಪಿ. ರಾಜೀವ್, ಎನ್.ಎಸ್. ನಂದೀಶ ರೆಡ್ಡಿ, ಜಿ. ಪ್ರೀತಂ ಗೌಡ ಅವರನ್ನು ನೇಮಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕ್ಯಾ. ಬೃಜೇಶ್ ಚೌಟ ಅವರನ್ನು ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಲಾಗಿದೆ. 

ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಶೈಲೇಂದ್ರ ಬೆಲ್ದಾಳೆ, ಡಿ.ಎಸ್.‌ಅರುಣ್, ಬಸವರಾಜ್ ಮತ್ತಿಮೋಡ್, ಸಿ. ಮುನಿರಾಜು, ವಿನಯ್ ಬಿದರೆ, ಕ್ಯಾ.ಬೃಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ. ಲಕ್ಷ್ಮೀ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್ ಅವರನ್ನು ನೇಮಿಸಲಾಗಿದೆ. 

ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.‌ಮಂಜುಳಾ, ಯುವಮೋರ್ಚಾ ರಾಜ್ಯಾಧ್ಯಕ್ಷರಾಗಿ ಧೀರಜ್ ಮುನಿರಾಜು ನೇಮಕವಾಗಿದೆ. ಎಸ್ಟಿ ಮೋರ್ಚಾಗೆ ಬಂಗಾರು ಹನುಮಂತು, ಎಸ್ಸಿ ಮೋರ್ಚಾಗೆ ಎಸ್. ಮಂಜುನಾಥ್, ಹಿಂ. ವರ್ಗಗಳ ರಾಜ್ಯಾಧ್ಯಕ್ಷರಾಗಿ ರಘು ಕೌಟಿಲ್ಯ, ರೈತ ಮೋರ್ಚಾಗೆ ಎ.ಎಸ್. ಪಾಟೀಲ್ ನಡಹಳ್ಳಿ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಅನಿಲ್ ಥಾಮಸ್ ನೇಮಕ ಮಾಡಲಾಗಿದೆ. 

ಇದಲ್ಲದೆ, ಮುರುಗೇಶ್ ನಿರಾಣಿ, ಬೈರತಿ ಬಸವರಾಜ್ ಸೇರಿದಂತೆ ಹತ್ತು ಮಂದಿಯನ್ನು ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಬಹುತೇಕ ಯುವಕರ ಪಡೆಯನ್ನು ವಿಜಯೇಂದ್ರ ಆಯ್ಕೆ ಮಾಡಿದ್ದು ಎರಡು ದಿನಗಳ ಹಿಂದೆ ಹೈಕಮಾಂಡ್ ಮುಂದೆ ತೋರಿಸಿ ಒಪ್ಪಿಗೆ ಪಡೆದು ಬಂದಿದ್ದಾರೆ.

In a major surgery for the state BJP, state bjp president Vijayendra has appointed new state office-bearers. Karkala MLA Sunil Kumar and P. Sudhakar have been appointed as state general secretaries. Rajeev, N.S. Nandeesh Reddy, G. Preetham Gowda has been appointed. From Dakshina Kannada district. Brajesh Chowta has been appointed as the state secretary.