ಬ್ರೇಕಿಂಗ್ ನ್ಯೂಸ್
18-11-20 05:59 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 18: ಸಿಎಂ ಯಡಿಯೂರಪ್ಪ ಸದ್ಯದಲ್ಲೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡೋದು ಪಕ್ಕಾ ಆಗಿದೆ. ಈ ವೇಳೆ, ಕೆಲವು ಹಿರಿಯ ಸಚಿವರಿಗೆ ಕೊಕ್ ನೀಡುವುದಕ್ಕೂ ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಹಾಗೊಂದ್ವೇಳೆ ನಡೆದರೆ, ಮೊದಲ ವಿಕೆಟ್ ಪತನವಾಗೋದು ಕರಾವಳಿಯ ಏಕೈಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರದ್ದು.
ಅತ್ತ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯುವುದಕ್ಕೆ ದೆಹಲಿಗೆ ತೆರಳಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಜೊತೆ ಮಾತನಾಡಿ, ವಿಸ್ತರಣೆಯೋ, ಪುನಾರಚನೆಯೋ ಏನಾದ್ರೂ ಒಂದನ್ನು ಮಾಡಿಕೊಂಡು ಬರ್ತೀನಿ ಎಂದಿದ್ದಾರೆ. ಇದೇ ವೇಳೆ, ರಾಜ್ಯ ರಾಜಕೀಯದಲ್ಲಿ ಹಲವರು ಸಂಪುಟ ಸೇರಲು ಲಾಬಿ ಆರಂಭಿಸಿದ್ದಾರೆ. ಈ ಪೈಕಿ ಹೊಸತಾಗಿ ಶಾಸಕರಾಗಿರುವ ಎಂಟಿಬಿ ನಾಗರಾಜ್, ಮುನಿರತ್ನ ಸಚಿವರಾಗುವುದು ಖಚಿತ ಎನ್ನಲಾಗುತ್ತಿದೆ. ಇವರ ಜೊತೆ ಸಂಪುಟ ಸೇರುವ ಇತರರು ಯಾರು ಎನ್ನುವ ಬಗ್ಗೆ ಕುತೂಹಲ ಎದ್ದಿದೆ.
ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ
ಕರಾವಳಿಯ ಏಕೈಕ ಸಚಿವ ಮತ್ತು ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಸದಸ್ಯರು. ಅಲ್ಲದೆ, ಪರಿಷತ್ತಿನಲ್ಲಿ ಅತ್ಯಂತ ಅನುಭವೀ ಸದಸ್ಯರೂ ಹೌದು. ಸದ್ಯಕ್ಕೆ ವಿಧಾನ ಪರಿಷತ್ ಸಭಾಪತಿಯಾಗಿ ಕಾಂಗ್ರೆಸಿನ ಪ್ರತಾಪಚಂದ್ರ ಶೆಟ್ಟಿ ಇದ್ದಾರೆ. ಪ್ರತಾಪಚಂದ್ರ ಶೆಟ್ಟಿಯವರು ಕೂಡ ಉಡುಪಿ ಮೂಲದವರು. ಇತ್ತೀಚೆಗೆ ನಡೆದ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ನಾಲ್ಕು ಮಂದಿ ಗೆದ್ದು ಪರಿಷತ್ ಸೇರಿದ್ದಾರೆ. ಇದರಿಂದ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಬಲ 31ಕ್ಕೇರಿದ್ದರೆ, ಕಾಂಗ್ರೆಸ್ ಬಲ 29ಕ್ಕೆ ಕುಸಿದಿದೆ. ಜೆಡಿಎಸ್ ಸದಸ್ಯರು 14 ಮಂದಿ ಇದ್ದಾರೆ.
ಈಗಿನ ಸನ್ನಿವೇಶದಲ್ಲಿ ಜೆಡಿಎಸ್, ಪರೋಕ್ಷವಾಗಿ ಬಿಜೆಪಿ ಬೆಂಬಲಕ್ಕೆ ನಿಂತಿದೆ. ಹೀಗಾಗಿ ಡಿಸೆಂಬರ್ ನಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಪರಿಷತ್ತಿನ ಹಾಲಿ ಅಧ್ಯಕ್ಷರನ್ನು ಬದಲಾಯಿಸಲು ಬಿಜೆಪಿ ನಿಶ್ಚಯಿಸಿದ್ದು ಅವಿಶ್ವಾಸ ನಿರ್ಣಯ ಮಂಡಿಸಲು ತಯಾರಾಗಿದೆ. ಪ್ರತಾಪಚಂದ್ರ ಶೆಟ್ಟರ ಬದಲಿಗೆ, ಉಡುಪಿಯವರೇ ಆಗಿರುವ ಹಿರಿಯ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರನ್ನು ಪರಿಷತ್ ಸಭಾಪತಿಯಾಗಿಸಲು ಬಿಜೆಪಿ ಚಿಂತನೆ ನಡೆಸಿದೆ. ಕೋಟ ತೆರವು ಮಾಡುವ ಸಚಿವ ಸ್ಥಾನಕ್ಕೆ ಹೊಸಬರನ್ನು ತರುವ ಚಿಂತನೆ ಬಿಜೆಪಿಗಿದೆ. ಇಂಥ ಬದಲಾವಣೆ ನಡೆದರೆ, ದಕ್ಷಿಣ ಕನ್ನಡ ಅಥವಾ ಉಡುಪಿಯಿಂದ ಯಾರಾದ್ರೂ ಒಬ್ಬರನ್ನು ಸಚಿವ ಸ್ಥಾನಕ್ಕೇರಿಸುವ ಸಾಧ್ಯತೆ ಇದೆ.
ಸಚಿವ ಸ್ಥಾನಕ್ಕೆ ಯಾರು ?
ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾಗುವ ಸಚಿವ ಸ್ಥಾನಕ್ಕೆ ಹೊಸಬರನ್ನು ತರಲು ಬಿಜೆಪಿ ರೆಡಿಯಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಬಿಜೆಪಿ ಶಾಸಕರಿದ್ದಾರೆ. ಇದರಲ್ಲಿ ಅನುಭವ, ಹಿರಿತನದಲ್ಲಿ ನೋಡಿದರೆ ಸುಳ್ಯ ಶಾಸಕ ಎಸ್.ಅಂಗಾರ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಉಡುಪಿಯ ರಘುಪತಿ ಭಟ್ ಇದ್ದಾರೆ. ಈ ನಾಲ್ವರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು. ಮಂಗಳೂರಿನ ಭಾಗದವರನ್ನೇ ಸಚಿವ ಸ್ಥಾನಕ್ಕೆ ತರಬೇಕೆಂಬ ನಿರ್ಧಾರಕ್ಕೆ ಬಂದರೆ, ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್ ಅದೃಷ್ಟ ಖುಲಾಯಿಸಿದರೆ ಅಚ್ಚರಿ ಇಲ್ಲ.
District Incharge minister of Dakshina Kannada Kota Srinivas Pooajry has got high chances of becoming the Chairman of Karnataka Legislative council says sources.
23-02-25 06:38 pm
Bangalore Correspondent
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm