ಬ್ರೇಕಿಂಗ್ ನ್ಯೂಸ್
25-12-23 08:49 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.25: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನಡೆಸಿದ ಜಿನೋಮ್ ಸಿಕ್ವೇನ್ಸಿಂಗ್ ನಲ್ಲಿ ಒಮಿಕ್ರಾನ್ ವೈರಾಣು ಉಪತಳಿ JN.1 ಪತ್ತೆಯಾಗಿದೆ. ಸುಮಾರು 34 ಕೋವಿಡ್ ಸೊಂಕಿತರಿಗೆ JN.1 ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಚಿವರು, JN.1 ವೈರಾಣು ರಾಜ್ಯದಲ್ಲಿ ಇರಬಹುದು ಎಂದು ಮೊದಲೇ ನಿರೀಕ್ಷಿಸಲಾಗಿತ್ತು. ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷಾ ವರದಿ ಬಂದಿದ್ದು, ರಾಜ್ಯದಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿದೆ ಎಂದರು. ಹಾಗಂತ, ಜನರು ಕೋವಿಡ್ ಸಂಬಂಧ ಆತಂಕ ಪಡುವ ಅಗತ್ಯವಿಲ್ಲ. JN.1 ಉಪತಳಿ ಅಪಾಯಕಾರಿ ಅಲ್ಲ ಎಂಬುದನ್ನ ತಜ್ಞರು ಈಗಾಗಲೇ ಹೇಳಿದ್ದಾರೆ. ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಹರಡದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ.

ಬಹುತೇಕ ಜೆಎನ್ 1 ಪ್ರಕರಣಗಳು ಬೆಂಗಳೂರಿನಲ್ಲೇ ಪತ್ತೆಯಾಗಿವೆ. ಬೆಂಗಳೂರಿನಲ್ಲಿ - 20, ಮೈಸೂರು - 4, ಮಂಡ್ಯ - 3 ಸೇರಿದಂತೆ ರಾಮನಗರದಲ್ಲಿ - 1 ಪತ್ತೆಯಾಗಿದ್ದು, ಇಲ್ಲಿಯವರೆಗೆ ಕೋವಿಡ್ ಬಂದವರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿಯೂ JN.1 ಪಾಸಿಟಿವ್ ಇದ್ದಿದ್ದು ವರದಿಯಲ್ಲಿ ಬೆಳಕಿಗೆ ಬಂದಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಸಂಬಂಧ ರಚಿಸಿರುವ ಕ್ಯಾಬಿನೆಟ್ ಉಪಸಮಿತಿ ಸಭೆ ಮಂಗಳವಾರ ನಡೆಯಲಿದೆ. ಸಭೆಯಲ್ಲಿ ಜೆ.ಎನ್ 1 ಪ್ರಕರಣ ಸೇರಿದಂತೆ, ಕೋವಿಡ್ ನಿಯಂತ್ರಣ ಹಾಗೂ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು. ಸದ್ಯಕ್ಕೆ ಯಾವುದೇ ಹೊಸ ನಿರ್ಬಂಧವಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರು ಮಾಸ್ಕ್ ಧರಿಸುವುದು ಉತ್ತಮ ಎಂಬುದು ನಮ್ಮ ಸಲಹೆ. ಇನ್ನು 60 ವರ್ಷ ಮೇಲ್ಪಟ್ಟವರು, ಇತರ ಕಾಯಿಲೆ ಹೊಂದಿದವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಜೆ.ಎನ್.1 ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಮಾರ್ಗಸೂಚಿ ಇಲ್ಲ. ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವ ಬಗ್ಗೆ ಚಿಂತನೆಗಳಿಲ್ಲ. ಜನ ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಜಾರಿ ಮಾಡ್ತಿಲ್ಲ. ಆ ಮಟ್ಟಕ್ಕೆ ಪ್ಯಾನಿಕ್ ಆಗುವ ಅಗತ್ಯವಿಲ್ಲ. ಪಾಸಿಟಿವ್ ಬಂದವರು ಐಸೊಲೇಷನ್ ನಲ್ಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
JN1 virus in Karnataka, 34 cases found says health Minister Dinesh Gundu Rao.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm