ಬ್ರೇಕಿಂಗ್ ನ್ಯೂಸ್
25-12-23 10:03 pm HK News Desk ಕರ್ನಾಟಕ
ಶಿರಸಿ, ಡಿ 25: ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಭಾರತ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಸಂಸದ, ಬಿಜೆಪಿ ಮುಖಂಡ ಅನಂತ ಕುಮಾರ್ ಹೆಗಡೆ ಸವಾಲು ಹಾಕಿದ್ದಾರೆ. ಹಲವು ತಿಂಗಳಿನಿಂದ ಕಣ್ಮರೆಯಾಗಿದ್ದ ಅನಂತ್ ಕುಮಾರ್ ಹೆಗಡೆ ಮತ್ತೆ ಸುದ್ದಿಯಲ್ಲಿದ್ದಾರೆ.
ಉತ್ತರ ಕನ್ನಡ ಸಂಸದ ಅನಂತ್ಕುಮಾರ್ ಹೆಗಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಧ್ಯವಾದರೆ ಭಾರತವನ್ನು 'ಹಿಂದೂ ರಾಷ್ಟ್ರ' ಆಗದಂತೆ ತಡೆಯಲಿ ಎಂದು ಸವಾಲು ಹಾಕಿದ್ದು, ಹಿಜಾಬ್ ವಿಚಾರದ ಬಗ್ಗೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು
![]()
ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹೆಗ್ಡೆ, ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಸಿದ್ದರಾಮಯ್ಯನವರ ಸರ್ಕಾರ ಮೊಹಮ್ಮದ್ ಬಿನ್ ತುಘಲಕ್ ಸರ್ಕಾರ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿರಸಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಮತವಿಲ್ಲದೆ ಕಾಂಗ್ರೆಸ್ ಉಳಿಯುವುದಿಲ್ಲ. ಕಾಂಗ್ರೆಸ್ ಎಂದಿಗೂ ಬಹುಮತದ ರಾಜಕಾರಣಕ್ಕೆ ಒಲವು ತೋರಿಲ್ಲ. ಅದು ಸದಾ ಹುಚ್ಚಾಟದ ರಾಜಕಾರಣ ಮಾಡುತ್ತಿದೆ ಎಂದರು.
ಟಿಪ್ಪು ಸುಲ್ತಾನ್ ಈ ರಾಜ್ಯವನ್ನು ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಹಾಳು ಮಾಡಿದ್ದು, ಜನ ಆತನನ್ನು ತಿರಸ್ಕರಿಸಿದ್ದಾರೆ. ಟಿಪ್ಪು ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಮಾಡಿದರೆ, ಮುಂದೆ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾಂಗ್ರೆಸ್ ನಾಯಕರು ಯೋಚಿಸಬೇಕು ಎಂದು ಹೇಳಿದರು.
ಯಾರು ಬೇಕಾದರೂ ಯಾವ ಡ್ರೆಸ್ ಹಾಕಿಕೊಳ್ಳಬಹುದು ಎಂಬ ಸಿದ್ದರಾಮಯ್ಯನವರ ಹೇಳಿಕೆ ಭವಿಷ್ಯದಲ್ಲಿ ಅಪಾಯಕಾರಿ ಬೆಳವಣಿಗೆಗಳಿಗೆ ಕಾರಣವಾಗಲಿದೆ. ಅವರಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ, ನಮ್ಮ ಜನರು ಕೇಸರಿ ಶಾಲುಗಳನ್ನು ಧರಿಸುತ್ತಾರೆ. ಸರ್ಕಾರವು ಒಂದು ನಿರ್ದಿಷ್ಟ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು, ಆದರೆ ಸಿಎಂ ಅದನ್ನು ಮೀರುತ್ತಿದ್ದಾರೆ, ಸಿದ್ದರಾಮಯ್ಯನವರಿಗೆ ಛಲವಿದ್ದರೆ ಈ ದೇಶ ಹಿಂದೂ ರಾಷ್ಟ್ರವಾಗುವುದನ್ನು ತಡೆಯಲು ಪ್ರಯತ್ನಿಸಲಿ ಎಂದು ಹೇಳಿದರು.
ಸಿದ್ದರಾಮಯ್ಯನವರ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ. ಕರ್ನಾಟಕದಲ್ಲಿ ಹಿಂದೂ ವಿರೋಧಿ ಸರ್ಕಾರ ಇರಲು ಸಾಧ್ಯವಿಲ್ಲ. ಮುಸಲ್ಮಾನರ ಹಿತಾಸಕ್ತಿ ಮುಂದಿಟ್ಟುಕೊಂಡು ಕಾಂಗ್ರೆಸ್ ಉಳಿಯಬೇಕು ಮತ್ತು ಮತ ಪಡೆಯಬೇಕು ಎಂದಾದರೆ ಇಂತಹ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ, ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Uttara Kannada MP Ananth Kumar Hegde, who had been away from the limelight for several months, on Sunday dared Chief Minister Siddaramaiah to stop India from becoming a ‘Hindu Rashtra’ if he could. “If Chief Minister Siddaramaiah has the courage, let him try to stop India from becoming a Hindu nation”, he thundered.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm