ಬ್ರೇಕಿಂಗ್ ನ್ಯೂಸ್
26-12-23 11:01 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷೆಯ ಐದನೇ ಗ್ಯಾರಂಟಿ ಯೋಜನೆ 'ಯುವ ನಿಧಿ' ನೋಂದಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನೋಂದಣಿ ಮಾಡಿಸಿಕೊಂಡವರಿಗೆ ಜನವರಿ 12ರ ವಿವೇಕಾನಂದ ಜಯಂತಿಯ ದಿನ ಹಣ ಜಮಾ ಆಗಲಿದೆ. ಅದೇ ದಿನ ಉದ್ಘಾಟನಾ ಕಾರ್ಯಕ್ರಮ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಹೇಳಿದರು.
ಕಳೆದ ಸಾಲಿನಲ್ಲಿ ಡಿಪ್ಲೊಮಾ ಇಲ್ಲವೇ ಪದವಿ ಪೂರೈಸಿದ್ದು, ಇನ್ನೂ ಯಾವುದೇ ಉದ್ಯೋಗ ಸಿಗದವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಡಿಪ್ಲೋಮಾ ಹೋಲ್ಡರ್ಗಳಿಗೆ ಮುಂದಿನ ಎರಡು ವರ್ಷ ತಿಂಗಳಿಗೆ 1500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯೋಜನೆ ಇದಾಗಿದೆ. ಯಾವುದೇ ಉದ್ಯೋಗ ಸಿಕ್ಕರೆ ತಕ್ಷಣ ಯೋಜನೆ ಸ್ಥಗಿತಗೊಳಿಸಲು ಅರ್ಜಿ ಸಲ್ಲಿಸಬೇಕು ಎಂದು ಮಾನದಂಡದಲ್ಲಿ ಸೂಚಿಸಲಾಗಿದೆ.
ನರೇಂದ್ರ ಮೋದಿಯವರು ಕಾಂಗ್ರೆಸ್ ಗ್ಯಾರಂಟಿ ಜಾರಿ ಮಾಡೋಕ್ಕಾಗಲ್ಲ ಅಂದಿದ್ದರು. ಗ್ಯಾರಂಟಿ ಜಾರಿ ಮಾಡಿದ್ರೆ ಕರ್ನಾಟಕ ದಿವಾಳಿಯಾಗುತ್ತೆ ಎಂದು ರಾಜಸ್ಥಾನದಲ್ಲಿ ಹೇಳಿಕೆ ನೀಡಿದ್ದರು. 12 ವರ್ಷ ಮುಖ್ಯಮಂತ್ರಿಯಾಗಿ, ಹತ್ತು ವರ್ಷ ಪ್ರಧಾನ ಮಂತ್ರಿ ಆಗಿದ್ದವರು ಈ ಹೇಳಿಕೆ ನೀಡಿದ್ದರು. ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ರಾಜ್ಯ ದಿವಾಳಿ ಆಗಿಲ್ಲ ಎಂದು ಹೇಳಬಯಸುತ್ತೇನೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿಗೆ ಸವಾಲು ಹಾಕಿದರು. ನಾವು ಈ ವರ್ಷ ಗ್ಯಾರಂಟಿಗಾಗಿ 39 ಸಾವಿರ ಕೋಟಿ ನೀಡಿದ್ದೇವೆ. ಉಚಿತ ಯೋಜನೆ ನೀಡಿದ ಮೇಲೂ ರಾಜ್ಯ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಯುವ ನಿಧಿಯಲ್ಲಿ 5 ಲಕ್ಷದ 29 ಸಾವಿರ ಪದವೀಧರರು ಹಾಗೂ ಡಿಪ್ಲೊಮಾ ಹೋಲ್ಡರ್ಗಳಿಗೆ ಯೋಜನೆ ಪಡೆಯಲು ಅವಕಾಶವಿದೆ. ಮಾರ್ಚ್ ಕೊನೆ ವರೆಗೆ 250 ಕೋಟಿ ಖರ್ಚು ಮಾಡಲಿದ್ದೇವೆ ಎಂದು ವಿವರಿಸಿದರು.
Karnataka Chief Minister Siddaramaiah on December 26 launched the registration of the fifth and last poll guarantee ‘Yuva Nidhi’ in Bengaluru offering unemployment assistance to graduates and diploma holders.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
19-05-26 10:47 pm
HK News Desk
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm