ಬ್ರೇಕಿಂಗ್ ನ್ಯೂಸ್
28-12-23 05:35 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 28: ಫೆ.28ರೊಳಗೆ ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ 60%ರಷ್ಟು ಕನ್ನಡ ಭಾಷೆ ಬಳಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಈ ಸಂಬಂಧ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅಂಗಡಿ-ಮುಂಗಟ್ಟುಗಳ ಮುಂಭಾಗ ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಉನ್ನತ ಮಟ್ಟದ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ 10.03.23ರಂದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2023ರಲ್ಲಿ ಕಾಯ್ದೆ ರೂಪಿಸಿತ್ತು. ಈ ಕಾಯ್ದೆಗೆ ರಾಜ್ಯಪಾಲರು ಕೂಡ ಅಂಕಿತ ಹಾಕಿದ್ದಾರೆ. ಆದರೆ ರೂಲ್ ಫ್ರೇಮ್ ಆಗಿರಲಿಲ್ಲ. ಅದರಂತೆ ಸೆಕ್ಷನ್ 17(6)ರಂತೆ ಸರ್ಕಾರದ ಅಥವಾ ಸ್ಥಳೀಯ ಪದಾಧಿಕಾರಿಗಳ ಅನುಮೋದನೆಯೊಂದಿಗೆ ವಾಣಿಜ್ಯ, ಕೈಗಾರಿಕೆ, ಅಂಗಡಿ, ಸಮಾಲೋಚನಾ ಕೇಂದ್ರಗಳು, ಹೊಟೇಲ್ಗಳು ಹೆಸರುಗಳನ್ನು ಪ್ರದರ್ಶಿಸುವ ಬೋರ್ಡ್ನ ಅರ್ಧ ಭಾಗ ಕನ್ನಡದಲ್ಲಿ ಇರಬೇಕು ಎಂದಿದೆ. ಈ ಕಾಯ್ದೆಯಲ್ಲಿ 50:50ರ ಅನುಪಾತದಲ್ಲಿ ಕನ್ನಡ, ಆಂಗ್ಲ ಭಾಷೆ ಬಳಕೆಯ ನಿಯಮವಿದೆ ಎಂದು ವಿವರಿಸಿದರು.



ಈ ಹಿಂದೆ ನಮ್ಮ ಸರ್ಕಾರ ಇದ್ದಾಗ 60:40 ಅನುಪಾತದಲ್ಲಿ ಕನ್ನಡ, ಆಂಗ್ಲ ಭಾಷೆ ಬಳಕೆ ಮಾಡುವ ಬಗ್ಗೆ ನಿಯಮ ಇತ್ತು. 24.03.2018ರಲ್ಲಿ ಈ ಸಂಬಂಧ ನಾವು ಸುತ್ತೋಲೆ ಹೊರಡಿಸಿ, ನಾಮಫಲಕದ 60%ರಷ್ಟು ಭಾಗದಲ್ಲಿ ಕನ್ನಡ ಬಳಸಲು ಹೇಳಲಾಗಿತ್ತು. ಆದರೆ ಹೊಸ ಕಾಯ್ದೆಯಲ್ಲಿ 50:50 ಕನ್ನಡ, ಆಂಗ್ಲ ಬಳಕೆ ಮಾಡುವ ನಿಯಮ ಇತ್ತು. ಈಗ 50:50 ಬದಲು 60:40 ಕನ್ನಡ, ಆಂಗ್ಲ ಭಾಷೆ ಬಳಕೆ ಮಾಡಲು ಕಾನೂನಿಗೆ ತಿದ್ದುಪಡಿ ತರಲು ಸೂಚನೆ ನೀಡಿದ್ದೇನೆ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸೂಚನೆ ನೀಡಿದ್ದೇನೆ ಎಂದರು.
2024ರ ಫೆ.28ರೊಳಗೆ, ಈ ತಿದ್ದುಪಡಿ ಕಾಯ್ದೆಯಂತೆ ಕಾನೂನು ಪಾಲಿಸುವಂತೆ ಸೂಚನೆ ನೀಡಿದ್ದೇನೆ ಎಂದು ಇದೇ ವೇಳೆ ತಿಳಿಸಿದರು. ಈ ಕಾಯ್ದೆಯ ನಿಯಮ 17(8)ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲಾ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರಬೇಕು. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು. ಈ ಕಾಯ್ದೆ ಇಡೀ ರಾಜ್ಯಕ್ಕೆ ಅನ್ವಯಿಸುತ್ತದೆ.



ಈ ಕಾಯ್ದೆ ಬಗ್ಗೆ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ನಿಯಮವೂ ರೂಪಿಸಿಲ್ಲ. ಹೀಗಾಗಿ ತಿದ್ದುಪಡಿಯೊಂದಿಗೆ ನಿಯಮ ರೂಪಿಸುವಂತೆ ಸೂಚನೆ ನೀಡಲಾಗಿದೆ. ಕಾನೂನು ಜಾರಿ ವಿಳಂಬವಾಗಿರುವುದು ನಿಜ. ಇನ್ನು ವಿಳಂಬವಾಗದಂತೆ ಸೂಚನೆ ನೀಡಿದ್ದೇನೆ. ಅಂಗಡಿ ಮುಂಗಟ್ಟುಗಳು ನಿಯಮ ಪಾಲಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಾಂತಿಯುತ ಪ್ರತಿಭಟನೆಗೆ ಸರ್ಕಾರದ ವಿರೋಧ ಇಲ್ಲ. ಅದಕ್ಕೆ ಸರ್ಕಾರ ಅಡ್ಡಿಪಡಿಸಲ್ಲ. ಆದರೆ ಕಾನೂನು ವಿರುದ್ಧವಾಗಿ ನಡೆದರೆ ಸರ್ಕಾರ ಅದನ್ನು ಸಹಿಸಲ್ಲ. 2022ರಲ್ಲಿ ಹೈಕೋರ್ಟ್ ಆದೇಶದಂತೆ ಪ್ರತಿಭಟನೆ ಕೇವಲ ಫ್ರೀಡಂ ಪಾರ್ಕ್ನಲ್ಲಿ ಮಾತ್ರ ಮಾಡುವಂತೆ ತೀರ್ಪು ನೀಡಿದೆ. ರಾಜ್ಯದ ಹಿತದೃಷ್ಟಿಯಿಂದ ಪ್ರತಿಭಟನೆ ಮಾಡಿದರೆ ನಾವು ವಿರೋಧ ಮಾಡಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳುತ್ತ
ಹಾಗಾಗಿ ಯಾವುದೇ ಸಂಘಟನೆಗಳು ಕಾನೂನು ರೀತಿಯಲ್ಲಿ ನಡೆದುಕೊಳ್ಳಬೇಕು. ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಎಲ್ಲಾ ಹೋರಾಟಗಾರರಿಗೆ, ಸಂಘಟನೆಗಳಿಗೆ ನಾನು ಮನವಿ ಮಾಡುತ್ತೇನೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ನಾವು ಕನ್ನಡ ಪರವಾಗಿದ್ದೇವೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯ ಇಲ್ಲ. ಆತಂಕಪಡದ ರೀತಿಯಲ್ಲಿ ನಾವು ಕಾನೂನು ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದರು.
ಯಾವುದೇ ಕೈಗಾರಿಕೆ, ಅಂಗಡಿ, ಸಂಸ್ಥೆ ಮತ್ತು ವಾಣಿಜ್ಯ ಸಂಸ್ಥೆಯ ಮಾಲೀಕ ಅಥವಾ ಅದರ ಉಸ್ತುವಾರಿ ವ್ಯಕ್ತಿಗಳು ಈ ಅಧಿನಿಯಮದ ಪ್ರಕರಣ 17ರ (6) ರಿಂದ (10) ರವರೆಗಿನ ಉಪಪ್ರಕರಣಗಳ ಉಪಬಂಧಗಳನ್ನು ಪಾಲಿಸಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ.
ಮೊದಲನೆಯ ಅಪರಾಧಕ್ಕಾಗಿ ರೂ.5,000 ವರೆಗೆ ದಂಡ ವಿಧಿಸಲಾಗುತ್ತದೆ. ಎರಡನೆಯ ಅಪರಾಧಕ್ಕಾಗಿ ರೂ.10,000ವರೆಗೆ ದಂಡ ಹಾಕಲಾಗುತ್ತದೆ ನಂತರದ ಪ್ರತಿಯೊಂದು ಅಪರಾಧಕ್ಕಾಗಿ ರೂ.20,000 ವರೆಗೆ ದಂಡ ವಿಧಿಸಲಾಗುತ್ತದೆ. ಜೊತೆಗೆ ಪರವಾನಗಿಯನ್ನೂ ಸಹ ರದ್ದುಗೊಳಿಸಲಾಗುತ್ತದೆ.
ಯಾವುದೇ ಕ್ರಮ ಕೈಗೊಳ್ಳುವ ಮುಂಚೆ ಅಧಿನಿಯಮದ ಉಲ್ಲಂಘನೆಗಾಗಿ ಕಾರಣ ಕೇಳುವ ನೋಟಿಸ್ ನೀಡಲಾಗುತ್ತದೆ. ನೋಟಿಸಿನ ದಿನಾಂಕದಿಂದ ಹದಿನೈದು ದಿನಗಳೊಳಗೆ ಈ ಅಧಿನಿಯಮದ ಉಪಬಂಧಗಳ ಪಾಲನೆಗಾಗಿ ಅವಕಾಶ ಒದಗಿಸಲಾಗುತ್ತದೆ. ಕಾರಣ ಕೇಳುವ ನೋಟಿಸಿನ ಅನುಸರಣೆ ಮಾಡಲು ವಿಫಲವಾದಲ್ಲಿ ಮೇಲ್ಕಂಡ ಅಪರಾಧ ಮತ್ತು ದಂಡನೆಗೆ ಗುರಿಯಾಗುತ್ತಾರೆ ಎಂದು ತಿಳಿಸಲಾಗಿದೆ.
Rakshana vedike members vandalise signboards across Bengalore, CM Siddaramaiah, Narayana Gowda. 20 thousand fine will be imposed if there is no 60 percent kannada in the sign boards said CM Siddaramaiah.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm