ಬ್ರೇಕಿಂಗ್ ನ್ಯೂಸ್
19-11-20 11:18 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 19: ಅವಧಿ ಪೂರ್ಣಗೊಂಡರೂ ರಾಜೀನಾಮೆ ನೀಡದ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅವರನ್ನು ಬಿಜೆಪಿ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಸುಜಾತ ಕೃಷ್ಣಪ್ಪ ಅವರನ್ನು ಅಮಾನತು ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ಪಕ್ಷದ ತೀರ್ಮಾನ ಉಲ್ಲಂಘಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪ ಸುಜಾತಾ ಅವರ ಮೇಲಿತ್ತು. ಸುಜಾತಾ ಕೃಷ್ಣಪ್ಪ ಅವರಿಂದ ಪಕ್ಷದ ಘನತೆಗೆ ಧಕ್ಕೆ ಉಂಟಾಗಿದೆ. ಈ ಕುರಿತು ಸಮಜಾಯಿಷಿ ನೀಡಲು ಸೂಚಿಸಿದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
ಪಕ್ಷದ ಆಂತರಿಕ ಒಪ್ಪಂದದಂತೆ ಅಧ್ಯಕ್ಷಗಿರಿಗೆ ಸುಜಾತ ಕೃಷ್ಣಪ್ಪ ರಾಜೀನಾಮೆ ನೀಡಿರಲಿಲ್ಲ. ಹೀಗಾಗಿ ಬುಧವಾರ ಸ್ವಪಕ್ಷಿಯ ಸದಸ್ಯರೇ ಜಿಲ್ಲಾ ಪಂಚಾಯಿತಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಅಧ್ಯಕ್ಷೆ ಸುಜಾತ ಕೃಷ್ಣಪ್ಪ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, ಧಿಕ್ಕಾರ ಕೂಗಿದ್ದರು.
ಪಕ್ಷದ ಆಂತರಿಕ ಒಪ್ಪಂದದಂತೆ ನೀವು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕೆಂದು ಪಟ್ಟು ಹಿಡಿದಿದ್ದರು. ಈ ವೇಳೆ ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ವಾಕ್ಸಮರವೂ ನಡೆಯಿತು. ನಂತರ ಬಿಜೆಪಿ ಸದಸ್ಯರು ಸಭೆ ಬಹಿಷ್ಕರಿಸಿ ಹೊರನಡೆದಿದ್ದರು.
ಈ ಮುನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಖುದ್ದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೂಚನೆ ನೀಡಿದ್ದರೂ ಸುಜಾತ ಕೃಷ್ಣಪ್ಪ ಸೊಪ್ಪು ಹಾಕಿರಲಿಲ್ಲ. ಇದೀಗ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
Chikmagalur Zilla Panchayath President Sujatha Krishna was terminated from its office for continuing to work without giving resignation.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm