ಬ್ರೇಕಿಂಗ್ ನ್ಯೂಸ್
19-11-20 03:44 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 19 : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕಾಫಿ ಡೇ ಸಿದ್ಧಾರ್ಥ ಪುತ್ರ ಅಮಾರ್ಥ್ಯ ಅವರ ವಿವಾಹ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಿದೆ.
ಡಿಕೆ ಶಿವಕುಮಾರ್ ಹಾಗೂ ಎಸ್ ಎಂ ಕೃಷ್ಣ ಕುಟುಂಬಸ್ಥರು ಮತ್ತು ಆಪ್ತರು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಜೂನ್ 12 ರಂದು ಸದಾಶಿವ ನಗರದಲ್ಲಿರುವ ಎಸ್.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಕುಟುಂಬ ಸದಸ್ಯರು ಮದುವೆ ಮಾತುಕತೆ ನಡೆಸಿದ್ದರು. 2021ರ ಫೆಬ್ರವರಿಯಲ್ಲಿ ಇವರ ವಿವಾಹ ನಡೆಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಆರ್ ಅಶೋಕ್ ಸೇರಿದಂತೆ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.





ಉತ್ತರ ಪ್ರದೇಶದ ಖ್ಯಾತ ಜ್ಯೋತಿಷಿ ಪಂಡಿತ್ ಅವರ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ನಿಶ್ಚಿತಾರ್ಥ ನಡೆಯಿತು. ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಗಮಿಸಿ ನವ ಜೋಡಿಗೆ ಹಾರೈಸಿದರು. ಸಭಾಂಗಣವೆಲ್ಲ ಗುಲಾಬಿಮಯವಾಗಿದ್ದು, ಐಶ್ವರ್ಯ ಹಾಗೂ ಅಮರ್ಥ್ಯ ಗುಲಾಬಿ ಬಣ್ಣದ ಉಡುಗೆಯನ್ನು ತೊಟ್ಟು ಕಂಗೊಳಿಸುತ್ತಿದ್ದಾರೆ.
ಹೋಟೆಲ್ನಲ್ಲಿ ಒಟ್ಟು 50 ರೂಂಗಳನ್ನು ಬುಕ್ ಮಾಡಲಾಗಿದ್ದು, ಒಟ್ಟು 250 ಮಂದಿಗೆ ಆಹ್ವಾನ ನೀಡಲಾಗಿದೆ. ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಆಪ್ತ ಶಾಸಕರು, ಕುಟುಂಬಸ್ಥರು, ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಕೊರೊನಾ ಹಿನ್ನೆಲೆ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಆಮಂತ್ರಣ ನೀಡಲಾಗಿಲ್ಲ.
ಅಮರ್ಥ್ಯ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಹಿರಿಯ ಪುತ್ರನಾಗಿದ್ದು ತಂದೆ ಮೃತಪಟ್ಟ ನಂತರ ಅವರ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಐಶ್ವರ್ಯಾ ತನ್ನ ತಂದೆ ನಡೆಸುತ್ತಿರುವ ಗ್ಲೋಬಲ್ ಎಂಜಿನಿಯರಿಂಗ್ ಕಾಲೇಜನ್ನು ನೋಡಿಕೊಳ್ಳುತ್ತಿದ್ದಾರೆ.
Politics were set aside temporarily as photos from the celebrations showed Karnataka Chief Minister Yediyurappa, who sat in the front row, holding DK Shivakumar's hand.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm