ಬ್ರೇಕಿಂಗ್ ನ್ಯೂಸ್
19-11-20 03:44 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 19 : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕಾಫಿ ಡೇ ಸಿದ್ಧಾರ್ಥ ಪುತ್ರ ಅಮಾರ್ಥ್ಯ ಅವರ ವಿವಾಹ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಿದೆ.
ಡಿಕೆ ಶಿವಕುಮಾರ್ ಹಾಗೂ ಎಸ್ ಎಂ ಕೃಷ್ಣ ಕುಟುಂಬಸ್ಥರು ಮತ್ತು ಆಪ್ತರು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಜೂನ್ 12 ರಂದು ಸದಾಶಿವ ನಗರದಲ್ಲಿರುವ ಎಸ್.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಕುಟುಂಬ ಸದಸ್ಯರು ಮದುವೆ ಮಾತುಕತೆ ನಡೆಸಿದ್ದರು. 2021ರ ಫೆಬ್ರವರಿಯಲ್ಲಿ ಇವರ ವಿವಾಹ ನಡೆಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಆರ್ ಅಶೋಕ್ ಸೇರಿದಂತೆ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.





ಉತ್ತರ ಪ್ರದೇಶದ ಖ್ಯಾತ ಜ್ಯೋತಿಷಿ ಪಂಡಿತ್ ಅವರ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ನಿಶ್ಚಿತಾರ್ಥ ನಡೆಯಿತು. ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಗಮಿಸಿ ನವ ಜೋಡಿಗೆ ಹಾರೈಸಿದರು. ಸಭಾಂಗಣವೆಲ್ಲ ಗುಲಾಬಿಮಯವಾಗಿದ್ದು, ಐಶ್ವರ್ಯ ಹಾಗೂ ಅಮರ್ಥ್ಯ ಗುಲಾಬಿ ಬಣ್ಣದ ಉಡುಗೆಯನ್ನು ತೊಟ್ಟು ಕಂಗೊಳಿಸುತ್ತಿದ್ದಾರೆ.
ಹೋಟೆಲ್ನಲ್ಲಿ ಒಟ್ಟು 50 ರೂಂಗಳನ್ನು ಬುಕ್ ಮಾಡಲಾಗಿದ್ದು, ಒಟ್ಟು 250 ಮಂದಿಗೆ ಆಹ್ವಾನ ನೀಡಲಾಗಿದೆ. ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಆಪ್ತ ಶಾಸಕರು, ಕುಟುಂಬಸ್ಥರು, ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಕೊರೊನಾ ಹಿನ್ನೆಲೆ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಆಮಂತ್ರಣ ನೀಡಲಾಗಿಲ್ಲ.
ಅಮರ್ಥ್ಯ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಹಿರಿಯ ಪುತ್ರನಾಗಿದ್ದು ತಂದೆ ಮೃತಪಟ್ಟ ನಂತರ ಅವರ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಐಶ್ವರ್ಯಾ ತನ್ನ ತಂದೆ ನಡೆಸುತ್ತಿರುವ ಗ್ಲೋಬಲ್ ಎಂಜಿನಿಯರಿಂಗ್ ಕಾಲೇಜನ್ನು ನೋಡಿಕೊಳ್ಳುತ್ತಿದ್ದಾರೆ.
Politics were set aside temporarily as photos from the celebrations showed Karnataka Chief Minister Yediyurappa, who sat in the front row, holding DK Shivakumar's hand.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm