ಬ್ರೇಕಿಂಗ್ ನ್ಯೂಸ್
19-11-20 03:44 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 19 : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕಾಫಿ ಡೇ ಸಿದ್ಧಾರ್ಥ ಪುತ್ರ ಅಮಾರ್ಥ್ಯ ಅವರ ವಿವಾಹ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಿದೆ.
ಡಿಕೆ ಶಿವಕುಮಾರ್ ಹಾಗೂ ಎಸ್ ಎಂ ಕೃಷ್ಣ ಕುಟುಂಬಸ್ಥರು ಮತ್ತು ಆಪ್ತರು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಜೂನ್ 12 ರಂದು ಸದಾಶಿವ ನಗರದಲ್ಲಿರುವ ಎಸ್.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಕುಟುಂಬ ಸದಸ್ಯರು ಮದುವೆ ಮಾತುಕತೆ ನಡೆಸಿದ್ದರು. 2021ರ ಫೆಬ್ರವರಿಯಲ್ಲಿ ಇವರ ವಿವಾಹ ನಡೆಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಆರ್ ಅಶೋಕ್ ಸೇರಿದಂತೆ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.





ಉತ್ತರ ಪ್ರದೇಶದ ಖ್ಯಾತ ಜ್ಯೋತಿಷಿ ಪಂಡಿತ್ ಅವರ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ನಿಶ್ಚಿತಾರ್ಥ ನಡೆಯಿತು. ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಗಮಿಸಿ ನವ ಜೋಡಿಗೆ ಹಾರೈಸಿದರು. ಸಭಾಂಗಣವೆಲ್ಲ ಗುಲಾಬಿಮಯವಾಗಿದ್ದು, ಐಶ್ವರ್ಯ ಹಾಗೂ ಅಮರ್ಥ್ಯ ಗುಲಾಬಿ ಬಣ್ಣದ ಉಡುಗೆಯನ್ನು ತೊಟ್ಟು ಕಂಗೊಳಿಸುತ್ತಿದ್ದಾರೆ.
ಹೋಟೆಲ್ನಲ್ಲಿ ಒಟ್ಟು 50 ರೂಂಗಳನ್ನು ಬುಕ್ ಮಾಡಲಾಗಿದ್ದು, ಒಟ್ಟು 250 ಮಂದಿಗೆ ಆಹ್ವಾನ ನೀಡಲಾಗಿದೆ. ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಆಪ್ತ ಶಾಸಕರು, ಕುಟುಂಬಸ್ಥರು, ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಕೊರೊನಾ ಹಿನ್ನೆಲೆ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಆಮಂತ್ರಣ ನೀಡಲಾಗಿಲ್ಲ.
ಅಮರ್ಥ್ಯ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಹಿರಿಯ ಪುತ್ರನಾಗಿದ್ದು ತಂದೆ ಮೃತಪಟ್ಟ ನಂತರ ಅವರ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಐಶ್ವರ್ಯಾ ತನ್ನ ತಂದೆ ನಡೆಸುತ್ತಿರುವ ಗ್ಲೋಬಲ್ ಎಂಜಿನಿಯರಿಂಗ್ ಕಾಲೇಜನ್ನು ನೋಡಿಕೊಳ್ಳುತ್ತಿದ್ದಾರೆ.
Politics were set aside temporarily as photos from the celebrations showed Karnataka Chief Minister Yediyurappa, who sat in the front row, holding DK Shivakumar's hand.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm