ಬ್ರೇಕಿಂಗ್ ನ್ಯೂಸ್
19-11-20 03:44 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 19 : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕಾಫಿ ಡೇ ಸಿದ್ಧಾರ್ಥ ಪುತ್ರ ಅಮಾರ್ಥ್ಯ ಅವರ ವಿವಾಹ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದಿದೆ.
ಡಿಕೆ ಶಿವಕುಮಾರ್ ಹಾಗೂ ಎಸ್ ಎಂ ಕೃಷ್ಣ ಕುಟುಂಬಸ್ಥರು ಮತ್ತು ಆಪ್ತರು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಜೂನ್ 12 ರಂದು ಸದಾಶಿವ ನಗರದಲ್ಲಿರುವ ಎಸ್.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಕುಟುಂಬ ಸದಸ್ಯರು ಮದುವೆ ಮಾತುಕತೆ ನಡೆಸಿದ್ದರು. 2021ರ ಫೆಬ್ರವರಿಯಲ್ಲಿ ಇವರ ವಿವಾಹ ನಡೆಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಆರ್ ಅಶೋಕ್ ಸೇರಿದಂತೆ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.





ಉತ್ತರ ಪ್ರದೇಶದ ಖ್ಯಾತ ಜ್ಯೋತಿಷಿ ಪಂಡಿತ್ ಅವರ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ನಿಶ್ಚಿತಾರ್ಥ ನಡೆಯಿತು. ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಗಮಿಸಿ ನವ ಜೋಡಿಗೆ ಹಾರೈಸಿದರು. ಸಭಾಂಗಣವೆಲ್ಲ ಗುಲಾಬಿಮಯವಾಗಿದ್ದು, ಐಶ್ವರ್ಯ ಹಾಗೂ ಅಮರ್ಥ್ಯ ಗುಲಾಬಿ ಬಣ್ಣದ ಉಡುಗೆಯನ್ನು ತೊಟ್ಟು ಕಂಗೊಳಿಸುತ್ತಿದ್ದಾರೆ.
ಹೋಟೆಲ್ನಲ್ಲಿ ಒಟ್ಟು 50 ರೂಂಗಳನ್ನು ಬುಕ್ ಮಾಡಲಾಗಿದ್ದು, ಒಟ್ಟು 250 ಮಂದಿಗೆ ಆಹ್ವಾನ ನೀಡಲಾಗಿದೆ. ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಆಪ್ತ ಶಾಸಕರು, ಕುಟುಂಬಸ್ಥರು, ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಕೊರೊನಾ ಹಿನ್ನೆಲೆ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಆಮಂತ್ರಣ ನೀಡಲಾಗಿಲ್ಲ.
ಅಮರ್ಥ್ಯ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಹಿರಿಯ ಪುತ್ರನಾಗಿದ್ದು ತಂದೆ ಮೃತಪಟ್ಟ ನಂತರ ಅವರ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಐಶ್ವರ್ಯಾ ತನ್ನ ತಂದೆ ನಡೆಸುತ್ತಿರುವ ಗ್ಲೋಬಲ್ ಎಂಜಿನಿಯರಿಂಗ್ ಕಾಲೇಜನ್ನು ನೋಡಿಕೊಳ್ಳುತ್ತಿದ್ದಾರೆ.
Politics were set aside temporarily as photos from the celebrations showed Karnataka Chief Minister Yediyurappa, who sat in the front row, holding DK Shivakumar's hand.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm