ಬ್ರೇಕಿಂಗ್ ನ್ಯೂಸ್
01-01-24 05:42 pm Bangalore Correspondent ಕರ್ನಾಟಕ
ಬೆಂಗಳೂರು, ಜ.01: ಒಂದು ಕಡೆ ಹೊಸ ವರ್ಷದ ಪಾರ್ಟಿ, ಕುಣಿತ, ಸಂಭ್ರಮದಲ್ಲಿ ಯುವಕ- ಯುವತಿಯರು ತೊಡಗಿಸಿದ್ದರೆ, ಇಲ್ಲೊಬ್ಬಳು ಯುವತಿ ಕ್ಷುಲ್ಲಕ ವಿಚಾರಕ್ಕೆ ಮನನೊಂದು ಸಾವಿಗೆ ಶರಣಾಗಿದ್ದಾಳೆ. ಬೆಂಗಳೂರಿನ ಸುಧಾಮನಗರದಲ್ಲಿ ಘಟನೆ ನಡೆದಿದ್ದು ಬಿಬಿಎ ಕಲಿಯುತ್ತಿದ್ದ ವರ್ಷಿಣಿ (21) ಎಂಬ ವಿದ್ಯಾರ್ಥಿನಿ ಸಾವಿಗೀಡಾದವಳು.
ಫೋಟೋಶೂಟ್ ಬಗ್ಗೆ ವಿಪರೀತ ಹುಚ್ಚು ಅಂಟಿಸಿಕೊಂಡಿದ್ದ ಆಕೆಯನ್ನು ಫೋಟೊ ಶೂಟ್ ಹೋಗಬೇಡ ಎಂದು ಪೋಷಕರು ಬುದ್ಧಿ ಹೇಳಿದಕ್ಕೇ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಬಿಬಿಎ ಜೊತೆಗೆ ಫೋಟೋಗ್ರಫಿ ಸಹ ಓದುತ್ತಿದ್ದ ವಿದ್ಯಾರ್ಥಿನಿ, ನಿನ್ನೆ ತಡರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆಯಿಂದಲೇ ಜಯನಗರದ ಕಮ್ಯೂನಿಟಿ ಕಾಲೇಜಿಗೆ ಬಿಬಿಎ ವ್ಯಾಸಂಗಕ್ಕೆ ತೆರಳುತ್ತಿದ್ದಳು. ನಿನ್ನೆ ಮಾಲ್ಗೆ ಹೋಗಿ ಫೋಟೋಶೂಟ್ ಮಾಡಿಸಬೇಕು ಎಂದು ರೆಡಿಯಾಗಿದ್ದಳು. ಆದರೆ ಪೋಷಕರು ಮಾಲ್ಗೆ ಹೋಗಬೇಡ ಎಂದು ಬುದ್ಧಿ ಹೇಳಿದ್ದರು. ಇಷ್ಟಕ್ಕೆ ನೊಂದ ವರ್ಷಿಣಿ ರಾತ್ರಿ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 21-year-old student died by suicide at her house in Sudhamanagar, Bengaluru on Saturday night. The deceased woman has been identified as Varshini, a BBA student at a private college in Bengaluru. She allegedly died by suicide by hanging herself from a ceiling fan after her parents opposed her from going out for a photo shoot at the mall, according to police.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am